ಬೆಂಗಳೂರು:ತ್ರಿವಿಧ ದಾಸೋಹಿಶಿವಕುಮಾರ ಸ್ವಾಮೀಜಿ ಅವರ ಜನ್ಮ ದಿನದ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಕನ್ನಡದಲ್ಲೇ ಟ್ವೀಟ್ ಮಾಡಿಗೌರವಿಸಿದ್ದಾರೆ.
‘ಪರಮಪೂಜ್ಯ ಡಾ. ಶ್ರೀ ಶ್ರೀ ಶ್ರೀ ಶಿವಕುಮಾರ ಸ್ವಾಮೀಜಿ ಅವರ ಜಯಂತಿ ಅಂಗವಾಗಿ ಅವರಿಗೆ ಗೌರವ ನಮನಗಳು. ಸಮಾಜಕ್ಕೆ ಸ್ವಾಮೀಜಿ ನೀಡಿರುವ ಉತ್ಕೃಷ್ಟ ಕೊಡುಗೆ ಸದಾ ಸ್ಮರಣೀಯ’ ಎಂದು ನೆನಪಿಸಿಕೊಂಡಿದ್ದಾರೆ.
ಶಿಕ್ಷಣದ ಮೂಲಕ ಲಕ್ಷಾಂತರ ಜನರಿಗೆ ಬದುಕು ರೂಪಿಸಿಕೊಟ್ಟ ತುಮಕೂರಿನಸಿದ್ದಗಂಗಾ ಮಠದ ಸ್ವಾಮೀಜಿ,ತಮ್ಮ 111ನೇ ವಯಸ್ಸಿನಲ್ಲಿ ಕಳೆದ ವರ್ಷಜನವರಿ 21 ರಂದುಲಿಂಗೈಕ್ಯರಾಗಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.