ADVERTISEMENT

ಜಂಗಮವಾಡಿ ಮಠಕ್ಕೆ ಮೋದಿ ಭೇಟಿ: ಸಿದ್ಧಾಂತ ಶಿಖಾಮಣಿಯ ಕೊಡುಗೆ ಕೊಂಡಾಡಿದ ಪ್ರಧಾನಿ

ಏಜೆನ್ಸೀಸ್
Published 16 ಫೆಬ್ರುವರಿ 2020, 6:50 IST
Last Updated 16 ಫೆಬ್ರುವರಿ 2020, 6:50 IST
ವಾರಾಣಸಿ ಜಂಗಮವಾಡಿ ಮಠದಲ್ಲಿ ಪ್ರಧಾನಿ ನರೇಂದ್ರ ಮೋದಿ
ವಾರಾಣಸಿ ಜಂಗಮವಾಡಿ ಮಠದಲ್ಲಿ ಪ್ರಧಾನಿ ನರೇಂದ್ರ ಮೋದಿ   

ವಾರಾಣಸಿ: ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲೆಂದುತಮ್ಮ ಸ್ವಕ್ಷೇತ್ರ ವಾರಾಣಸಿಗೆ ಭಾನುವಾರ ಭೇಟಿ ನೀಡಿರುವ ನರೇಂದ್ರ ಮೋದಿ, ಅಲ್ಲಿನ ಜಂಗಮವಾಡಿ ಮಠಕ್ಕೂ ತೆರಳಿ ಪ್ರಾರ್ಥನೆ ಸಲ್ಲಿಸಿದರು.

ಭಾರತೀಯ ಭಕ್ತಿ ಪರಂಪರೆಗೆ ವೀರಶೈವ ಸಂಪ್ರದಾಯ ನೀಡಿರುವ ಕೊಡುಗೆಗಳನ್ನು ಸ್ಮರಿಸಿದ ಅವರು, ಪವಿತ್ರ ಗ್ರಂಥ ‘ಸಿದ್ಧಾಂತ ಶಿಖಾಮಣಿ’ಯ ಪ್ರಾಮುಖ್ಯತೆ ಬಗ್ಗೆ ಮಾತನಾಡಿದರು.

ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಮತ್ತು ಕರ್ನಾಟಕ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಈ ಸಂದರ್ಭ ಉಪಸ್ಥಿತರಿದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.