ನವದೆಹಲಿ: ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಆರೋಪ ಎದುರಿಸುತ್ತಿರುವ ಕಾರ್ಪೊರೇಟ್ ಮಧ್ಯವರ್ತಿ ದೀಪಕ್ ತಲ್ವಾರ್, ದೆಹಲಿ ಹೈಕೋರ್ಟ್ಗೆ ಸಲ್ಲಿಸಿದ್ದ ಹೇಬಿಯಸ್ ಕಾರ್ಪಸ್ ಅರ್ಜಿಯನ್ನು ಹಿಂಪಡೆದಿದ್ದಾರೆ.
‘ಜ.30ರಿಂದ ನನ್ನನ್ನು ಬಂಧನದಲ್ಲಿ ಇರಿಸಿರುವುದು ಅಕ್ರಮ. ಅಧಿಕಾರಿಗಳಿಂದ ನನ್ನ ಹಕ್ಕುಗಳ ಉಲ್ಲಂಘನೆಯಾಗಿದೆ’ ಎಂದು ಉಲ್ಲೇಖಿಸಿ ಅವರು ಹೈಕೋರ್ಟ್ಗೆ ಈ ಅರ್ಜಿ ಸಲ್ಲಿಸಿದ್ದರು. ಆದರೆ ತಲ್ವಾರ್ ಪರ ವಕೀಲ ತನ್ವೀರ್ ಅಹ್ಮದ್ ಮಿರ್, ಈ ಅರ್ಜಿ ಹಿಂಪಡೆಯುವುದಾಗಿ ಹೇಳಿದ್ದಾರೆ. ಅಲ್ಲದೆಸುಪ್ರೀಂ ಕೋರ್ಟ್ ಈಚೆಗೆ ನೀಡಿದ್ದ ತೀರ್ಪೊಂದನ್ನು ಸಹ ಇದರ ಜತೆ ಉಲ್ಲೇಖಿಸಿದ್ದಾರೆ.
ಬಂಧನಕ್ಕೆ ಸಂಬಂಧಿಸಿದ ಕಾನೂನಾತ್ಮಕ ವಿಷಯ ಹಾಗೂ ವಾಸ್ತವಾಂಶಗಳನ್ನು ಉಲ್ಲೇಖಿಸಿ ವಿಚಾರಣಾ ನ್ಯಾಯಾಲಯದಲ್ಲಿಜಾಮೀನು ಅರ್ಜಿ ಸಲ್ಲಿಸಲಾಗುವುದು ಎಂದು ಮಿರ್ ಹೇಳಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.