ADVERTISEMENT

ಮುಂಗಾರು ಗರಿಗೆದರುವ ನಿರೀಕ್ಷೆ

​ಪ್ರಜಾವಾಣಿ ವಾರ್ತೆ
Published 2 ಆಗಸ್ಟ್ 2019, 16:55 IST
Last Updated 2 ಆಗಸ್ಟ್ 2019, 16:55 IST
.
.   

ಮುಂಗಾರಿನ ಎರಡು ತಿಂಗಳು ಮಳೆ ಕೊರತೆಯಲ್ಲಿ ಕಳೆದಿವೆ. ಮುಂದಿನ ಎರಡು ತಿಂಗಳು ಕರ್ನಾಟಕ ಸೇರಿದಂತೆ ದೇಶದಾದ್ಯಂತ ವಾಡಿಕೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ರಾಜ್ಯದಲ್ಲಿ ಜೂನ್ ಹಾಗೂ ಜುಲೈ ತಿಂಗಳಲ್ಲಿ ಶೇ 13ರಷ್ಟು ಮಳೆ ಕೊರತೆಯಾಗಿದೆ.

ರಾಜ್ಯದಲ್ಲಿ ಮಳೆ ಮುನ್ಸೂಚನೆ (ಆಗಸ್ಟ್ 2ರಿಂದ ಆಗಸ್ಟ್ 8)
* ಆಗಸ್ಟ್ 2ರಿಂದ ಆಗಸ್ಟ್ 8ರವರೆಗೆ ಕರಾವಳಿ ಕರ್ನಾಟಕ, ಉತ್ತರ ಒಳನಾಡು ಪ್ರದೇಶದಲ್ಲಿ ವಾಡಿಕೆಗಿಂತ ಹೆಚ್ಚು ಮಳೆಯಾಗಲಿದೆ. ದಕ್ಷಿಣ ಒಳನಾಡಿನಲ್ಲಿ ವಾಡಿಕೆ ಮಳೆ ಸುರಿಯುವ ನಿರೀಕ್ಷೆಯಿದೆ.
* ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೋಲಾರ, ಚಾಮರಾಜನಗರ, ಮಂಡ್ಯ ಹಾಗೂ ತುಮಕೂರು ಜಿಲ್ಲೆಗಳಲ್ಲಿ ಈ ವಾರ ವಾಡಿಕೆಗಿಂತ ಕಡಿಮೆ ಮಳೆ ಆಗಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT