ನವದೆಹಲಿ: ಕೇರಳ, ಕರ್ನಾಟಕ ಸೇರಿ ದೇಶದ 10 ರಾಜ್ಯಗಳಲ್ಲಿ ಈ ವರ್ಷದ ಮುಂಗಾರು ಮಳೆಗಾಲದಲ್ಲಿ ಉಂಟಾದ ಭೀಕರ ಪ್ರವಾಹ ಮತ್ತು ಭೂಕುಸಿತದಂತಹ ಅವಘಡಗಳಿಂದಾಗಿ 1,400 ಜನ ಸಾವನ್ನಪ್ಪಿದ್ದಾರೆ.
ಕೇರಳದಲ್ಲಿ ಶತಮಾನದಲ್ಲೇ ಕಂಡುಕೇಳರಿಯದ ಭೀಕರ ಪ್ರವಾಹದಲ್ಲಿ 488 ಜನರು ಬಲಿಯಾಗಿದ್ದಾರೆ. ಅಲ್ಲಿನ ಎಲ್ಲ 14 ಜಿಲ್ಲೆಗಳೂ ಪ್ರವಾಹಕ್ಕೆ ತುತ್ತಾಗಿವೆ.
ಕರ್ನಾಟಕದ ಕೊಡಗಿನಲ್ಲಿ ಸಂಭವಿಸಿದ ಭೂಕುಸಿತ ಸೇರಿದಂತೆ ಪ್ರವಾಹ ಪೀಡಿತ ರಾಜ್ಯಗಳಲ್ಲಿ ಸಾವಿರಾರು ಹೆಕ್ಟೇರ್ ಪ್ರದೇಶದಲ್ಲಿ ಬೆಳೆ ಹಾನಿಯಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.