ADVERTISEMENT

ಬೆಳಗಿನ ಪ್ರಮುಖ ಸುದ್ದಿಗಳು: ಸೋಮವಾರ, 19 ಜನವರಿ 2026

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 19 ಜನವರಿ 2026, 3:06 IST
Last Updated 19 ಜನವರಿ 2026, 3:06 IST
   

ಒಂದು ಗ್ರಾಮ ಪಂಚಾಯತ್ ಒಂದು ಚುನಾವಣೆ, ಗಾಜಾ ಶಾಂತಿ ಸಭೆಗೆ ಮೋದಿಗೆ ಆಹ್ವಾನ, ನ್ಯೂಜಿಲೆಂಡ್ ವಿರುದ್ಧದ ಏಕದಿನ ಕ್ರಿಕೆಟ್ ಸರಣಿಯಲ್ಲಿ ಭಾರತಕ್ಕೆ ಸೊಲು ಸೇರಿದಂತೆ ಈ ದಿನದ ಬೆಳಗಿನ ಪ್ರಮುಖ ಸುದ್ದಿಗಳು ಇಲ್ಲಿವೆ

ಒಂದು ಗ್ರಾಮ–ಒಂದು ಚುನಾವಣೆ:ತಾಲ್ಲೂಕು-ಗ್ರಾಮ ಪಂಚಾಯಿತಿಗಳಿಗೆ ಏಕಕಾಲಕ್ಕೆ ಚುನಾವಣೆ

ರಾಜ್ಯದ ಶೇ 90ರಷ್ಟು ಗ್ರಾಮ ಪಂಚಾಯಿತಿಗಳ ಅವಧಿ ಇನ್ನೆರಡು ತಿಂಗಳ ಒಳಗೆ ಮುಕ್ತಾಯವಾಗಲಿದ್ದು, ಜಿಲ್ಲಾ, ತಾಲ್ಲೂಕು ಪಂಚಾಯಿತಿಗಳ ಜತೆಗೇ ಗ್ರಾಮ ಪಂಚಾಯಿತಿಗಳಿಗೂ ಏಕಕಾಲಕ್ಕೆ ಚುನಾವಣೆ ನಡೆಸಲು ರಾಜ್ಯ ಸರ್ಕಾರ ‘ಮೂರು ಸ್ತರ: ಒಂದು ಗ್ರಾಮ–ಒಂದು ಚುನಾವಣೆ’ ಸೂತ್ರವನ್ನು ಸಿದ್ಧಪಡಿಸುತ್ತಿದೆ.

ಪೂರ್ತಿ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ

ADVERTISEMENT

ಸಂವಿಧಾನದನ್ವಯ ಅಧಿವೇಶನ ಕರೆದಿದ್ದೇವೆ: ಮುಖ್ಯಮಂತ್ರಿ ಸಿದ್ದರಾಮಯ್ಯ

ಸಿದ್ದರಾಮಯ್ಯ

ಮೈಸೂರು: 'ಅಧಿವೇಶನ ಕರೆದಿರುವುದು ರಾಜಕೀಯ ದುರ್ಬಳಕೆ’ ಎಂಬ ಬಿಜೆಪಿ ಆರೋಪಕ್ಕೆ ಪ್ರತಿಕ್ರಿಯಿಸಿದ ಅವರು, ‘ಹೊಸ ವರ್ಷದಲ್ಲಿ ಜಂಟಿ ಅಧಿವೇಶನ ಕಡ್ಡಾಯವಾಗಿ ಕರೆಯಬೇಕೆಂದು ಸಂವಿಧಾನ ಸ್ಪಷ್ಟವಾಗಿ ಹೇಳಿದೆ. ಅದಕ್ಕಾಗಿ ಕರೆದಿದ್ದೇವೆ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಪೂರ್ತಿ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ

ಲಕ್ಕುಂಡಿ ಕೋಟೆ ಆವರಣದಲ್ಲಿ ಉತ್ಖನನ: ಸರ್ಪದ ಚಿತ್ರವಿರುವ ಅವಶೇಷ ಪತ್ತೆ

ಗದಗ ತಾಲ್ಲೂಕಿನ ಲಕ್ಕುಂಡಿಯ ಕೋಟೆ ವೀರಭದ್ರೇಶ್ವರ ದೇವಸ್ಥಾನದ ಆವರಣದಲ್ಲಿ ನಡೆದಿರುವ ಉತ್ಖನನದಲ್ಲಿ ಭಾನುವಾರ ಸರ್ಪದ ಚಿತ್ರವಿರುವ ಪ್ರಾಚ್ಯ ಅವಶೇಷ ಸಿಕ್ಕಿದೆ

   

ಐತಿಹಾಸಿಕ ಲಕ್ಕುಂಡಿಯ ಕೋಟೆ ವೀರಭದ್ರೇಶ್ವರ ದೇವಸ್ಥಾನದ ಆವರಣದಲ್ಲಿ ನಡೆದಿರುವ ಉತ್ಖನನದಲ್ಲಿ ಭಾನುವಾರ ಸರ್ಪದ ಚಿತ್ರವಿರುವ ಪ್ರಾಚ್ಯಾವಶೇಷ, ತಾಮ್ರದ ಘಂಟೆ, ಮಣ್ಣಿನ ಧೂಪದಾರತಿ ಗೋಚರಿಸಿದೆ.

ಪೂರ್ತಿ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ

ಮಾಘಮೇಳ: 4.52 ಕೋಟಿಗೂ ಅಧಿಕ ಭಕ್ತರಿಂದ ಪುಣ್ಯಸ್ನಾನ

ಪ್ರಯಾಗ್‌ರಾಜ್‌ನ ತ್ರಿವೇಣಿ ಸಂಗಮದಲ್ಲಿ ಭಕ್ತರು ಭಾನುವಾರ ಪವಿತ್ರ ಸ್ನಾನ ಮಾಡಿದರು – ಪಿಟಿಐ ಚಿತ್ರ

ಪ್ರಯಾಗರಾಜ್: ಮಾಘಮೇಳದ ಅಂಗವಾಗಿ ಮೌನಿ ಅಮಾವಾಸ್ಯೆ ದಿನವಾದ ಭಾನುವಾರ ತ್ರಿವೇಣಿ ಸಂಗಮದಲ್ಲಿ 4.52 ಕೋಟಿಗೂ ಅಧಿಕ ಭಕ್ತರು ಪುಣ್ಯಸ್ನಾನ ಮಾಡಿದರು.

ಪೂರ್ತಿ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ

ಬಾಂಗ್ಲಾದೇಶದಲ್ಲಿ ಬಾಳೆ ಹಣ್ಣಿಗಾಗಿ ಹಿಂದೂ ವ್ಯಾಪಾರಿ ಹತ್ಯೆ

(ಸಾಂದರ್ಭಿಕ ಚಿತ್ರ)

ಢಾಕಾ: ಬಾಳೆ ಹಣ್ಣಿನ ವಿಚಾರವಾಗಿ ನಡೆದ ಗಲಾಟೆಯಲ್ಲಿ ಹಿಂದೂ ವ್ಯಾಪಾರಿಯೊಬ್ಬರನ್ನು ಥಳಿಸಿ ಹತ್ಯೆ ಮಾಡಿರುವ ಘಟನೆ ಬಾಂಗ್ಲಾದೇಶದ ಘಾಜಿ‍ಪುರ ಜಿಲ್ಲೆಯ ಕಾಳಿಗಂಜ್‌ನಲ್ಲಿ ನಡೆದಿದೆ.

ಪೂರ್ತಿ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ

ಇಂದಿನಿಂದ WEF ಸಭೆ: 64 ದೇಶಗಳ ಮುಖ್ಯಸ್ಥರು ಸೇರಿ 3,000 ಗಣ್ಯರು ಭಾಗಿ

‘ಉತ್ತಮ ಜಗತ್ತಿನ ಮರು ನಿರ್ಮಾಣ’ದ ಬಗ್ಗೆ ಅಮೆರಿಕ ಅಧ್ಯಕ್ಷ ಜೋ ಬೈಡನ್ ಅಧ್ಯಕ್ಷತೆಯಲ್ಲಿ ಸಭೆ. ಪ್ರಧಾನಿ ನರೇಂದ್ರ ಮೋದಿ ಸೇರಿ ಜಾಗತಿಕ ನಾಯಕರು ಈ ಚರ್ಚೆಯಲ್ಲಿ ಭಾಗಿ ಆಗಿದ್ದರು ಎಎಫ್‌ಪಿ ಚಿತ್ರ

ದಾವೋಸ್‌: ಸ್ವಿಟ್ಜರ್‌ಲೆಂಡ್‌ನ ದಾವೋಸ್‌ನಲ್ಲಿ ಸೋಮವಾರದಿಂದ ಐದು ದಿನಗಳ ಕಾಲ ವಿಶ್ವ ಆರ್ಥಿಕ ವೇದಿಕೆಯ (ಡಬ್ಲುಇಎಫ್‌) ವಾರ್ಷಿಕ ಸಭೆ ನಡೆಯಲಿದ್ದು, ಜಾಗತಿಕ ಗಣ್ಯರೊಂದಿಗೆ ಚರ್ಚಿಸಲು ಭಾರತವು ಪ್ರಬಲ ಪ್ರಾತಿನಿಧ್ಯದ ಜತೆ ಸಜ್ಜಾಗಿದೆ.

ಪೂರ್ತಿ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ

ಗಾಜಾ ಶಾಂತಿ ಮಂಡಳಿ: ಪ್ರಧಾನಿ ಮೋದಿಗೆ ಆಹ್ವಾನ

ಪ್ರಧಾನಿ ನರೇಂದ್ರ ಮೋದಿ

ವಾಷಿಂಗ್ಟನ್, ಅಮೆರಿಕ: ಯುದ್ಧಾನಂತರದ ಗಾಜಾದ ಆಡಳಿತ ಮತ್ತು ಪುನರ್‌ನಿರ್ಮಾಣವನ್ನು ಮೇಲ್ವಿಚಾರಣೆ ನಡೆಸಲು ಉದ್ದೇಶಿಸಲಾದ ‘ಶಾಂತಿ ಮಂಡಳಿ’ ಮತ್ತು ಸಂಬಂಧಿತ ಸಮಿತಿಗಳ ಸಭೆಯಲ್ಲಿ ಭಾಗವಹಿಸಲು ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್ ಅವರ ಆಡಳಿತವು ಭಾರತದ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಪ್ರಪಂಚದಾದ್ಯಂತ ವಿವಿಧ ದೇಶಗಳ ಪ್ರಮುಖರನ್ನು ಸಂಪರ್ಕಿಸಿದೆ.

ಪೂರ್ತಿ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ

ಚಿನ್ನದ ಬೆಲೆ ಈ ವಾರವೂ ಏರುವ ಸಾಧ್ಯತೆ

ಸಾಂಕೇತಿಕ ಚಿತ್ರ

ನ್ಯೂಜಿಲೆಂಡ್ ವಿರುದ್ಧ ಭಾರತಕ್ಕೆ ಸರಣಿ ಸೊಲು

ಇಂದೋರ್: ಭಾನುವಾರ ರಾತ್ರಿ ವಿರಾಟ್ ಕೊಹ್ಲಿ ಛಲದ ಶತಕ ಮತ್ತು ಹರ್ಷಿತ್ ರಾಣಾ ಅವರ ಸ್ಫೋಟಕ ಅರ್ಧಶತಕ ಮಾತ್ರ ಭಾರತದ ಅಭಿಮಾನಿಗಳ ನೆನಪಿನ ಪುಟದಲ್ಲಿ ಸೇರಿದವು. ಆದರೆ ನ್ಯೂಜಿಲೆಂಡ್ ತಂಡವು 38 ವರ್ಷಗಳ ನಂತರ ಭಾರತದಲ್ಲಿ ಏಕದಿನ ಕ್ರಿಕೆಟ್ ಸರಣಿ ಜಯಿಸಿತು.

ಪೂರ್ತಿ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ

ಕನ್ನಡ ಬಿಗ್‌ಬಾಸ್: ಗೆದ್ದ ಗಿಲ್ಲಿ ನಟ, ರಕ್ಷಿತಾ ಶೆಟ್ಟಿ ರನ್ನರ್‌ ಅಪ್‌

ಗಿಲ್ಲಿ ನಟ

ಬೆಂಗಳೂರು: ಖಾಸಗಿ ವಾಹಿನಿಯ ಬಿಗ್‌ ಬಾಸ್ ಕನ್ನಡ ಸೀಸನ್ 12ರಲ್ಲಿ ಗಿಲ್ಲಿ ನಟ ಎಂದೇ ಹೆಸರಾದ ನಟರಾಜ್ ವಿಜೇತರಾಗಿ ಹೊರಹೊಮ್ಮಿದರು. ರಕ್ಷಿತಾ ರನ್ನರ್ ಅಪ್ ಆದರು. ಭಾನುವಾರ ಬಿಡದಿಯ ಜಾಲಿವುಡ್​ ಸ್ಟುಡಿಯೋಸ್​​ನಲ್ಲಿ ನಡೆದ ಫಿನಾಲೆಯಲ್ಲಿ ಕಾರ್ಯಕ್ರಮದ ನಿರೂಪಕ–ನಟ ಸುದೀಪ್‌ ವಿಜೇತರನ್ನು ಘೋಷಿಸಿ, ಅಭಿನಂದಿಸಿದರು. ಇದರೊಂದಿಗೆ ಬಿಗ್‌ಬಾಸ್‌ ಕಾರ್ಯಕ್ರಮ ಅಂತ್ಯಗೊಂಡಿತು.

ಪೂರ್ತಿ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.