ADVERTISEMENT

ಕುತೂಹಲ ಕೆರಳಿಸಿದ ರಾಜ್ಯಸಭಾ ಚುನಾವಣೆ

ಪಿಟಿಐ
Published 18 ಜೂನ್ 2020, 20:27 IST
Last Updated 18 ಜೂನ್ 2020, 20:27 IST
ರಾಜ್ಯ ಸಭಾ ಚುನಾವಣೆ
ರಾಜ್ಯ ಸಭಾ ಚುನಾವಣೆ   

ನವದೆಹಲಿ (ಪಿಟಿಐ): ಮಧ್ಯಪ್ರದೇಶ, ಗುಜರಾತ್‌, ರಾಜಸ್ಥಾನ, ಮಣಿಪುರ ಸೇರಿದಂತೆ ವಿವಿಧ ರಾಜ್ಯಗಳ ವಿಧಾನಸಭೆಯಿಂದ ರಾಜ್ಯಸಭೆಗೆ ಶುಕ್ರವಾರ ನಡೆಯುವ ಚುನಾವಣೆ ತೀವ್ರ ಕುತೂಹಲ ಕೆರಳಿಸಿದೆ.

ಶಾಸಕರು ಪಕ್ಷಾಂತರ ಮಾಡಬಹುದು ಎಂಬ ಭೀತಿಯಿಂದಾಗಿ ರಾಜಸ್ಥಾನದಲ್ಲಿ ಕಾಂಗ್ರೆಸ್‌ ಮತ್ತು ಬಿಜೆಪಿ ತಮ್ಮ ಶಾಸಕರನ್ನು ಹೋಟೆಲ್‌ನಲ್ಲಿ ಇರಿಸಿವೆ. ಗುಜರಾತ್‌ನಲ್ಲಿ ಕಾಂಗ್ರೆಸ್‌ನ ಇಬ್ಬರು ಶಾಸಕರು ಈಗಾಗಲೇ ರಾಜೀನಾಮೆ ನೀಡಿದ್ದು, ಅಡ್ಡಮತದಾನದ ಭೀತಿ ಎದುರಾಗಿದೆ. ರಾಜ್ಯಸಭಾ ಚುನಾವಣೆಯ ಮೂರು ಸ್ಥಾನಗಳ ಗೆಲುವಿಗಾಗಿ ಅಂತಿಮ ಹಂತದ ಕಾರ್ಯತಂತ್ರಗಳ ಬಗ್ಗೆ ಚರ್ಚಿಸಲು ಮಧ್ಯಪ್ರದೇಶದಲ್ಲಿ ಆಡಳಿತಾರೂಢ ಬಿಜೆಪಿ ಮತ್ತು ವಿರೋಧ ಪಕ್ಷ ಕಾಂಗ್ರೆಸ್‌ ಗುರುವಾರ ಸಭೆಗಳನ್ನು ನಡೆಸಿ, ಕಾರ್ಯತಂತ್ರ ರೂಪಿಸುವ ಕೆಲಸದಲ್ಲಿ ತೊಡಗಿದ್ದವು.

ಕಾಂಗ್ರೆಸ್‌ ತೊರೆದು ಬಿಜೆಪಿ ಸೇರಿರುವ ಜ್ಯೋತಿರಾದಿತ್ಯ ಸಿಂಧಿಯಾ, ಕಾಂಗ್ರೆಸ್‌ನ ಹಿರಿಯ ಮುಖಂಡ ದಿಗ್ವಿಜಯ್‌ ಸಿಂಗ್ ಸೇರಿದಂತೆ ಹಲವು ನಾಯಕರು ಕಣದಲ್ಲಿದ್ದಾರೆ. ಶುಕ್ರವಾರ ಸಂಜೆಯೇ ಫಲಿತಾಂಶ ಪ್ರಕಟವಾಗಲಿದೆ. ಚುನಾವಣೆ ಹತ್ತಿರವಾಗಿರುವ ಬೆನ್ನಲ್ಲೇ, ಮಣಿಪುರದಲ್ಲಿ ಕ್ಷಿಪ್ರ ರಾಜಕೀಯ ಬೆಳವಣಿಗೆಗಳು ನಡೆದಿವೆ. ಮಣಿಪುರದಲ್ಲಿ ರಾಜ್ಯಸಭೆಯ ಒಂದು ಸ್ಥಾನಕ್ಕೆ ಚುನಾವಣೆ ನಡೆಯಲಿದ್ದು, ಬಿಜೆಪಿ ಮತ್ತು ಕಾಂಗ್ರೆಸ್‌ ಪಕ್ಷಗಳೆರಡೂ ತನ್ನ ಅಭ್ಯರ್ಥಿಗಳನ್ನು ಕಣಕ್ಕಿಳಿಸಿವೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.