ಭೋಪಾಲ್: ಲಾಕ್ಡೌನ್ ವೇಳೆ ದೇಶದ ವಿವಿಧ ನಗರಗಳಿಂದ ತಮ್ಮ ತವರಿಗೆ ಮರಳಿದ ವಲಸೆ ಕಾರ್ಮಿಕರಿಗೆ ಉದ್ಯೋಗಾವಕಾಶ ಸೃಷ್ಟಿಸುವ ನಿಟ್ಟಿನಲ್ಲಿ ಮಧ್ಯಪ್ರದೇಶ ಸರ್ಕಾರ ಆಯೋಗ ರಚಿಸಿದೆ.
ಮಧ್ಯಪ್ರದೇಶ ರಾಜ್ಯ ವಲಸೆ ಕಾರ್ಮಿಕರ ಆಯೋಗವನ್ನು(ಎಂಪಿಎಸ್ಎಂಎಲ್ಸಿ) ವಲಸೆ ಕಾರ್ಮಿಕರ ಕಲ್ಯಾಣಕ್ಕಾಗಿ ರಚಿಸಲಾಗಿದೆ ಎಂದು ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ತಿಳಿಸಿದ್ದಾರೆ.
‘ಕಾರ್ಮಿಕರಿಗೆ ಅಗತ್ಯವಿರುವ ಮೂಲ ಸೌಕರ್ಯಗಳನ್ನು ಸೃಷ್ಟಿಸಿ ಮಧ್ಯಪ್ರದೇಶದಲ್ಲೇ ಜೀವನೋಪಾಯ ಕಂಡುಕೊಳ್ಳುವಲ್ಲಿ ಆಯೋಗವು ನೆರವಾಗಲಿದೆ’ ಎಂದು ಅವರು ತಿಳಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.