ADVERTISEMENT

ಉಪರಾಷ್ಟ್ರಪತಿಯನ್ನು ಭೇಟಿಯಾದ ಮಧ್ಯಪ್ರದೇಶ ರಾಜ್ಯಪಾಲ, ಕೇಂದ್ರ ಸಚಿವರು

ಪಿಟಿಐ
Published 17 ಜುಲೈ 2021, 10:04 IST
Last Updated 17 ಜುಲೈ 2021, 10:04 IST
ಉಪರಾಷ್ಟ್ರಪತಿ ಅವರನ್ನು ಭೇಟಿಯಾದ ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್
ಉಪರಾಷ್ಟ್ರಪತಿ ಅವರನ್ನು ಭೇಟಿಯಾದ ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್   

ನವದೆಹಲಿ: ಮಧ್ಯಪ್ರದೇಶದ ರಾಜ್ಯಪಾಲ ಮಂಗುಭಾಯಿ ಛಗನ್‌ಭಾಯಿ ಪಟೇಲ್‌, ಕೇಂದ್ರ ಸಚಿವರುಗಳಾದ ಧರ್ಮೇಂದ್ರ ಪ್ರಧಾನ್, ಮನಸುಖ್‌ ಮಾಂಡವೀಯ ಮತ್ತು ಭೂಪೇಂದರ್ ಯಾದವ್ ಅವರು ಉಪ‍ರಾಷ್ಟ್ರಪತಿ ಎಂ.ವೆಂಕಯ್ಯನಾಯ್ಡು ಅವರನ್ನು ಶನಿವಾರ ಪ್ರತ್ಯೇಕವಾಗಿ ಭೇಟಿಯಾದರು.

ಈ ಭೇಟಿಯ ಫೋಟೊಗಳನ್ನು ಉಪರಾಷ್ಟ್ರಪತಿ ಅವರ ಸಚಿವಾಲಯ ಟ್ವಿಟರ್‌ನಲ್ಲಿ ಹಂಚಿಕೊಂಡಿದೆ.

ಇತ್ತೀಚಿಗೆ ಧರ್ಮೇಂದ್ರ ಪ್ರಧಾನ್‌ ಅವರು ಶಿಕ್ಷಣ, ಕೌಶಲ ಅಭಿವೃದ್ಧಿ ಮತ್ತು ಉದ್ಯಮಶೀಲತೆ ಇಲಾಖೆಯ ಸಚಿವರಾಗಿ ಅಧಿಕಾರ ಸ್ವೀಕರಿಸಿದ್ದರು. ಮಾಂಡವೀಯ ಅವರು ಆರೋಗ್ಯ, ಕುಟುಂಬ ಕಲ್ಯಾಣ ಇಲಾಖೆ ಮತ್ತು ರಾಸಾಯನಿಕ–ರಸಗೊಬ್ಬರ ಇಲಾಖೆಯ ಸಚಿವಾಗಿ ಅಧಿಕಾರ ಸ್ವೀಕರಿಸಿದ್ದರು.

ADVERTISEMENT

ಭೂಪೇಂದರ್ ಯಾದವ್ ಅವರನ್ನು ಪರಿಸರ, ಅರಣ್ಯ, ಕಾರ್ಮಿಕ, ಉದ್ಯೋಗ ಇಲಾಖೆಯ ನೂತನ ಸಚಿವರಾಗಿ ಅಧಿಕಾರ ಸ್ವೀಕರಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.