ಇಟಾವಾ, ಉತ್ತರ ಪ್ರದೇಶ: ಸಮಾಜವಾದಿ ಪಕ್ಷದ ಮುಖಂಡ ಮುಲಾಯಂ ಸಿಂಗ್ ಯಾದವ್ ಅವರು ಕೋವಿಡ್ ಪರಿಸ್ಥಿತಿಯ ಹಿನ್ನೆಲೆಯಲ್ಲಿಕುಟುಂಬ ಸದಸ್ಯರ ಮನವಿಗೆ ಸ್ಪಂದಿಸಿ ಸೋಮವಾರ ಪಂಚಾಯಿತಿ ಚುನಾವಣೆಯಲ್ಲಿ ಮತದಾನ ಮಾಡುವುದರಿಂದ ದೂರ ಉಳಿದರು.
‘81 ವರ್ಷದ ಅವರು ಇದುವರೆಗೆ ಒಮ್ಮೆಯೂ ಮತದಾನವನ್ನು ತಪ್ಪಿಸಿಕೊಂಡಿರಲಿಲ್ಲ. ಕೋವಿಡ್ ಕಾರಣದಿಂದ ಮತದಾನಕ್ಕೆ ಬರಬೇಡಿ ಎಂದು ಕೋರಿದ್ದೆವು. ಅವರೂ ಒಪ್ಪಿದರು. ಯಾದವ್ ಅವರು ಸದ್ಯ ದೆಹಲಿಯಲ್ಲಿದ್ದಾರೆ’ ಎಂದು ಅವರ ಸೋದರಳಿಯ ಧರ್ಮೇಂದ್ರ ಯಾದವ್ ತಿಳಿಸಿದರು.
ರಾಜ್ಯದಲ್ಲಿ ಪಂಚಾಯಿತಿಗಳಿಗೆ ಎರಡನೇ ಹಂತದಲ್ಲಿ ಸೋಮವಾರ 20 ಜಿಲ್ಲೆಗಳಲ್ಲಿ 2.23 ಲಕ್ಷ ಸ್ಥಾನಗಳಿಗೆಚುನಾವಣೆ ನಡೆಯುತ್ತಿದೆ. ಒಟ್ಟು 3.48 ಲಕ್ಷ ಅಭ್ಯರ್ಥಿಗಳು ಕಣದಲ್ಲಿದ್ದು, 3.26 ಕೋಟಿ ಮತದಾರರು ಹಕ್ಕು ಚಲಾಯಿಸಲಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.