ಮುಂಬೈ: ಆದಾಯ ಮೀರಿದ ಆಸ್ತಿ ಹೊಂದಿರುವ ದೂರಿಗೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಮತ್ತು ಅವರ ಪುತ್ರನ ವಿರುದ್ಧ ಪ್ರಾಥಮಿಕ ತನಿಖೆ ನಡೆಸಲಾಗಿದೆ ಎಂದು ಮುಂಬೈ ಪೊಲೀಸರು ಗುರುವಾರ ಬಾಂಬೆ ಹೈಕೋರ್ಟ್ಗೆ ತಿಳಿಸಿದ್ದಾರೆ.
ನ್ಯಾಯಮೂರ್ತಿಗಳಾದ ಧೀರಜ್ ಠಾಕೂರ್ ಮತ್ತು ವಾಲ್ಮೀಕಿ ಮೆನೆಜೆಸ್ ಅವರಿದ್ದ ದ್ವಿಸದಸ್ಯ ಪೀಠಕ್ಕೆ ಸರ್ಕಾರಿ ಅಭಿಯೋಜಕ ಅರುಣಾ ಕಾಮತ್ ಪೈ ಈ ಮಾಹಿತಿ ನೀಡಿದರು.
ಠಾಕ್ರೆ ಕುಟುಂಬದ ವಿರುದ್ಧ ಸಿಬಿಐ ಅಥವಾ ಇ.ಡಿ ತನಿಖೆ ಕೋರಿ ಗೌರಿ ಭಿಡೆ ಅವರು ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಆಧಾರರಹಿತವಾಗಿದ್ದು, ವಜಾ ಮಾಡಬೇಕು ಎಂದು ಠಾಕ್ರೆ ಕೋರಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.