ಮುಂಬೈ: ವಾಣಿಜ್ಯ ನಗರಿ ಮುಂಬೈ ಮತ್ತು ಕೊಂಕಣದ ಕರಾವಳಿ ತೀರ ಪ್ರದೇಶದಲ್ಲಿ ಕಳೆದ ಕೆಲವು ದಿನಗಳಿಂದ ಭಾರಿ ಮಳೆಯಾಗುತ್ತಿದೆ. ಪರಿಣಾಮವಾಗಿ ಮುಂಬೈ, ಥಾಣೆ, ನವೀಮುಂಬೈನಜನವಸತಿ ಪ್ರದೇಶಗಳಿಗೆ ನೀರು ನುಗ್ಗಿದ್ದು, ನಾಗರಿಕರು ತೀವ್ರ ತೊಂದರೆ ಅನುಭವಿಸುವಂತಾಗಿದೆ.
ಈ ನಡುವೆ ಶನಿವಾರ ಮತ್ತು ಭಾನುವಾರ ಉತ್ತರ, ದಕ್ಷಿಣ ಕೊಂಕಣ ಪ್ರದೇಶದಲ್ಲಿ (ಆಗಸ್ಟ್ 03–04ರ ವರೆಗೆ) ಹೆಚ್ಚಿನ ಮಳೆ ಸುರಿಯುವ ಸಾಧ್ಯೆತೆಗಳಿವೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ), ಸ್ಕೈಮೇಟ್ ಮುನ್ನೆಚ್ಚರಿಕೆ ನೀಡಿವೆ.
ಮುಂಬೈನಲ್ಲಿ ಶುಕ್ರವಾರದಿಂದಲೂ ಭಾರಿ ಮಳೆಯಾಗುತ್ತಿದ್ದು, ಆರು ಕಡೆಗಳಲ್ಲಿ ಗೋಡೆ ಕುಸಿದ ಪ್ರಕರಣಗಳು ವರದಿಯಾಗಿವೆ. ಇದರಲ್ಲಿ ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ.
ಮಳೆಯ ಕಾರಣದಿಂದ ಕೆಲವೆಡೆರೈಲು ಸಂಚಾರಕ್ಕೆ ತೊಡಕುಂಟಾಗಿದೆ. ಆದರೆ ವೈಮಾನಿಕ ಸೇವೆಯಲ್ಲಿ ಯಾವುದೇ ಅಡಚಣೆಯುಂಟಾಗಿಲ್ಲ.
ಸಮುದ್ರದಲ್ಲಿ ಭಾರಿ ಪ್ರಮಾಣದ ಉಬ್ಬರವಿಳಿತ
ಮಳೆಯ ಜತೆಗೇ ಮುಂಬೈನಲ್ಲಿ ಉಬ್ಬರವಿಳಿತ ಪ್ರಮಾಣವೂ ಹೆಚ್ಚಾಗಿದೆ. ಇಂದು ಮಧ್ಯಾಹ್ನ ಒಂದು ಗಂಟೆ ಹೊತ್ತಿಗೆ 4.90 ಮೀಟರ್ನಷ್ಟು ಭಾರಿ ಗಾತ್ರದ ಅಲೆಗಳು ತೀರಕ್ಕೆ ಅಪ್ಪಳಿಸುವ ಸಾಧ್ಯತೆಗಳಿವೆ ಎಂದು ಹೇಳಲಾಗಿದೆ.ಅಧಿಕ ಮಳೆ ಮತ್ತು ಉಬ್ಬರವಿಳಿತವಿರುವ ಸಂದರ್ಭದಲ್ಲಿ ಜನ ಸಮುದ್ರ ತೀರ ಪ್ರದೇಶಗಳಿಗೆ ಹೋಗುವುದು ಸೂಕ್ತವಲ್ಲ ಎಂಬ ಮುನ್ನೆಚ್ಚರಿಕೆಯನ್ನೂ ರವಾನಿಸಲಾಗಿದೆ.
ಇದನ್ನೂ ಓದಿ
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.