ADVERTISEMENT

ಮುಂಬೈನಲ್ಲಿ ಭಯೋತ್ಪಾದನಾ ದಾಳಿ ಭೀತಿ; ಪೊಲೀಸ್ ಕಟ್ಟೆಚ್ಚರ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 30 ಡಿಸೆಂಬರ್ 2021, 13:25 IST
Last Updated 30 ಡಿಸೆಂಬರ್ 2021, 13:25 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಮುಂಬೈ: ಮುಂಬೈನಲ್ಲಿ ವರ್ಷಾಂತ್ಯದಲ್ಲಿ (ಡಿ.31) ಭಯೋತ್ಪಾದನಾ ದಾಳಿ ನಡೆಸಲು ಖಲಿಸ್ತಾನ ಉಗ್ರರು ಸಂಚು ರೂಪಿಸಿದ್ದಾರೆಂಬ ಮಾಹಿತಿ ಹಿನ್ನೆಲೆಯಲ್ಲಿನಗರದಾದ್ಯಂತ ಪೊಲೀಸ್ ಕಟ್ಟೆಚ್ಚರ ವಹಿಸಲಾಗಿದೆ.

ಈ ಕುರಿತು ಸುದ್ದಿಸಂಸ್ಥೆ 'ಎಎನ್‌ಐ' ಟ್ವೀಟಿಸಿದೆ. ಭಯೋತ್ಪಾದನಾ ದಾಳಿ ಭೀತಿ ಹಿನ್ನೆಲೆಯಲ್ಲಿ ನಾಳೆ (ಶುಕ್ರವಾರ) ವಾರದ ರಜೆ ಸೇರಿದಂತೆ ರಜೆಯಲ್ಲಿರುವ ಎಲ್ಲ ಪೊಲೀಸರು ಕರ್ತವ್ಯಕ್ಕೆ ಹಾಜರಾಗುವಂತೆ ಸೂಚಿಸಲಾಗಿದೆ.

ವಾಣಿಜ್ಯ ನಗರಿಯಲ್ಲಿ ದಾಳಿ ಭೀತಿ ಹಿನ್ನೆಲೆಯಲ್ಲಿ ಪ್ರಮುಖ ನಿಲ್ದಾಣಗಳಾದ ದಾದರ್, ಬಾಂದ್ರಾ, ಚರ್ಚ್‌ಗೇಟ್, ಸಿಎಸ್‌ಎಂಟಿ, ಕುರ್ಲಾ ಮತ್ತು ಇತರೆ ನಿಲ್ದಾಣಗಳಲ್ಲಿ ಬಿಗಿ ಭದ್ರತೆಯನ್ನು ಏರ್ಪಡಿಸಲಾಗಿದೆ ಎಂದು ಮುಂಬೈ ಪೊಲೀಸ್ ಆಯುಕ್ತ (ಮುಂಬೈ ರೈಲ್ವೆ) ತಿಳಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.