ADVERTISEMENT

Mumbai Attack: ತಹವ್ವುರ್ ರಾಣಾ ನ್ಯಾಯಾಂಗ ಬಂಧನ ಜುಲೈ 9ರವೆರೆಗೆ ವಿಸ್ತರಣೆ

ಪಿಟಿಐ
Published 6 ಜೂನ್ 2025, 9:04 IST
Last Updated 6 ಜೂನ್ 2025, 9:04 IST
<div class="paragraphs"><p>ತಹವ್ವುರ್ ರಾಣಾ</p><p></p></div>

ತಹವ್ವುರ್ ರಾಣಾ

   

ನವದೆಹಲಿ: ಮುಂಬೈ ಭಯೋತ್ಪಾದಕ ದಾಳಿಯ ಸಂಚುಕೋರ ತಹವ್ವುರ್‌ ರಾಣಾನ ನ್ಯಾಯಾಂಗ ಬಂಧನದ ಅವಧಿಯನ್ನು ದೆಹಲಿಯ ನ್ಯಾಯಾಲಯವೊಂದು ಜುಲೈ 9ರವ‌ರೆಗೆ ವಿಸ್ತರಿಸಿದೆ.

ADVERTISEMENT

ಪ್ರಸ್ತುತ ತಿಹಾರ್‌ ಜೈಲಿನಲ್ಲಿರುವ ರಾಣಾ ವಿಡಿಯೊ ಕಾನ್ಫರೆನ್ಸ್ ಮೂಲಕ ವಿಚಾರಣೆಗೆ ಹಾಜರಾಗಿದ್ದ. ವಿಶೇಷ ನ್ಯಾಯಾಧೀಶರಾದ ಚಂದೆರ್‌ಜೀತ್‌ ಸಿಂಗ್‌ ಅವರು ಪ್ರಕರಣದ ವಿಚಾರಣೆ ನಡೆಸಿದರು.

ರಾಣಾ ಆರೋಗ್ಯ ಸ್ಥಿತಿಯ ಬಗ್ಗೆ ಆತನ ಪರ ವಕೀಲರು ಕಳವಳ ವ್ಯಕ್ತಪಡಿಸಿದ ಕಾರಣ, ‌ಜೂನ್‌ 9ರ ಒಳಗಾಗಿ ರಾಣಾ ಆರೋಗ್ಯ ಸ್ಥಿತಿಯ ಬಗ್ಗೆ ವರದಿ ನೀಡುವಂತೆ ನ್ಯಾಯಾಧೀಶರು‌ ತಿಹಾರ್‌ ಜೈಲಿನ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

2011ರಲ್ಲಿ ಮುಂಬೈನ‌ಲ್ಲಿ ನಡೆದಿದ್ದ ಭಯೋತ್ಪಾದಕ ದಾಳಿಯ ಪ್ರಮುಖ ಸಂಚುಕೋರ ಡೇವಿಡ್‌ ಕೋಲ್ಮನ್‌ ಹೆಡ್ಲಿಯ ಆಪ್ತನಾಗಿದ್ದ ರಾಣಾನನ್ನು ಅಮೆರಿಕವು ಏಪ್ರಿಲ್‌ನಲ್ಲಿ ಭಾರತಕ್ಕೆ ಹಸ್ತಾಂತರಿಸಿತ್ತು. ಬಳಿಕ ಆತನಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿತ್ತು.

2008ರ ನವೆಂಬರ್ 26ರಂದು ಮುಂಬೈ ಮೇಲೆ ನಡೆದ ಉಗ್ರರ ದಾಳಿಯಲ್ಲಿ 166 ಮಂದಿ ಮೃತಪಟ್ಟಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.