ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯ ಸೊಪೋರ್ ಪ್ರದೇಶದಲ್ಲಿ ಸೋಮವಾರ ಉಗ್ರರು ನಡೆಸಿದ ದಾಳಿಯಲ್ಲಿ ಬ್ಲಾಕ್ ಅಭಿವೃದ್ಧಿ ಸಮಿತಿ (ಬಿಡಿಸಿ) ಸದಸ್ಯ ಮತ್ತು ಅವರ ಭದ್ರತಾ ಸಿಬ್ಬಂದಿ ಕೊಲೆಯಾಗಿದ್ದಾರೆ. ದಾಳಿಯಲ್ಲಿ ಒಬ್ಬ ನಾಗರಿಕರಿಗೂ ಗಾಯಗಳಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ.
ಸೊಪೋರ್ನ ಪುರಸಭೆ ಕಚೇರಿ ಹೊರಭಾಗ ಬಿಡಿಸಿ ಸದಸ್ಯ ರಿಯಾಜ್ ಅಹ್ಮದ್ ಮತ್ತು ಅವರ ಭದ್ರತಾ ಸಿಬ್ಬಂದಿ ಶಫಾತ್ ಅಹ್ಮದ್ ಅವರ ಮೇಲೆ ಉಗ್ರರು ಗುಂಡಿನ ದಾಳಿ ನಡೆಸಿದರು. ಇಬ್ಬರೂ ಸ್ಥಳದಲ್ಲಿಯೇ ಮೃತಪಟ್ಟರು ಎಂದು ಪೊಲೀಸರು ಹೇಳಿದ್ದಾರೆ.
ಪೊಲೀಸರು ಘಟನಾ ಪ್ರದೇಶದಲ್ಲಿ ಸುತ್ತುವರಿದಿದ್ದು, ಉಗ್ರರ ಪತ್ತೆಗೆ ಶೋಧ ಕೈಗೊಂಡಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.