ADVERTISEMENT

ಕೇರಳದಲ್ಲಿ ಕಾಂಗ್ರೆಸ್‌ನಿಂದ ಹರತಾಳ

ಕೇರಳದಲ್ಲಿ ಯುವ ಕಾಂಗ್ರೆಸ್ ಕಾರ್ಯರ್ತರ ಹತ್ಯೆ:

ಪಿಟಿಐ
Published 18 ಫೆಬ್ರುವರಿ 2019, 20:09 IST
Last Updated 18 ಫೆಬ್ರುವರಿ 2019, 20:09 IST

ತಿರುವನಂತಪುರ: ಕೇರಳದ ಕಾಸರಗೋಡು ಜಿಲ್ಲೆಯಲ್ಲಿ ಭಾನುವಾರ ರಾತ್ರಿ ನಡೆದಿರುವ ಇಬ್ಬರು ಯುವ ಕಾಂಗ್ರೆಸ್ ಕಾರ್ಯಕರ್ತರ ಹತ್ಯೆ ಖಂಡಿಸಿ ರಾಜ್ಯದಾದ್ಯಂತ ಕಾಂಗ್ರೆಸ್ ಸೋಮವಾರ ಹರತಾಳ ನಡೆಸಿತು.

ಕಾಸರಗೋಡಿನಲ್ಲಿ ಕಾರ್ಯಕ್ರಮವೊಂದರಲ್ಲಿ ಭಾನುವಾರ ರಾತ್ರಿ ಪಾಲ್ಗೊಂಡು ಮನೆಗೆ ತೆರಳುತ್ತಿದ್ದ ಶರತ್ ಲಾಲ್‌ ಮತ್ತು ಕ್ರಿಪೇಶ್ ಎಂಬುವವರನ್ನು ಅಪಚಿತ ಗುಂಪೊಂದು ಅಡ್ಡಗಟ್ಟಿ ಹತ್ಯೆ ಮಾಡಿದೆ ಎಂದು ಪೊಲೀಸರು ತಿಳಿಸಿದ್ದಾರೆ. ವಿಷಯ ತಿಳಿಯುತ್ತಿದ್ದಂತೆ ರಾಜ್ಯ ದಾದ್ಯಂತ ಹರತಾಳಕ್ಕೆ ಕಾಂಗ್ರೆಸ್ ಸಾಮಾಜಿಕ ಜಾಲತಾಣಗಳ ಮೂಲಕ ಕರೆ ನೀಡಿತು. ಈ ಜೋಡಿ ಕೊಲೆಯಲ್ಲಿ ಆಡಳಿತ ಪಕ್ಷ ಸಿಪಿಎಂ ಪಾತ್ರವಿದೆ ಎಂದು ಕಾಂಗ್ರೆಸ್ ಆರೋಪಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT