ADVERTISEMENT

ಸಿಬಿಐ ನಿರ್ದೇಶಕ ರಾವ್‌ಗೆ ಬಡ್ತಿ

ಪಿಟಿಐ
Published 18 ಡಿಸೆಂಬರ್ 2018, 19:20 IST
Last Updated 18 ಡಿಸೆಂಬರ್ 2018, 19:20 IST

ನವದೆಹಲಿ: ಸಿಬಿಐ ಮಧ್ಯಂತರ ನಿರ್ದೇಶಕರಾಗಿ ಇತ್ತೀಚೆಗೆ ನೇಮಕಗೊಂಡಿದ್ದ ಎಂ.ನಾಗೇಶ್ವರ ರಾವ್‌ ಅವರಿಗೆ ಸರ್ಕಾರ ಮಂಗಳವಾರ ಹೆಚ್ಚುವರಿ ನಿರ್ದೇಶಕರ ಹುದ್ದೆಗೆ ಬಡ್ತಿ ನೀಡಿದೆ.

ರಾವ್‌ 1986ನೇ ತಂಡದ ಒಡಿಶಾ ಕೇಡರ್‌ ಐಪಿಎಸ್‌ ಅಧಿಕಾರಿಯಾಗಿದ್ದಾರೆ.ಸಿಬಿಐ ನಿರ್ದೇಶಕ ಅಲೋಕ್‌ ವರ್ಮಾ ಮತ್ತು ವಿಶೇಷ ನಿರ್ದೇಶಕ ರಾಕೇಶ್‌ ಆಸ್ತಾನಾ ಕಡ್ಡಾಯ ರಜೆಯ ಮೇಲೆ ಕಳಿಸಿದ ನಂತರ ರಾವ್‌ ಸಿಬಿಐ ಮಧ್ಯಂತರ ನಿರ್ದೇಶಕರಾಗಿ ಅಧಿಕಾರ ವಹಿಸಿಕೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT