ನವದೆಹಲಿ: ಲಡಾಖ್ನ ಗಾಲ್ವನ್ ಕಣಿವೆ ಬಳಿ ಚೀನಾದ ಸೇನೆಯೊಂದಿಗೆ ನಡೆದ ಸಂಘರ್ಷದಲ್ಲಿ ಹುತಾತ್ಮರಾದ 20 ಯೋಧರ ಹೆಸರನ್ನು ರಾಷ್ಟ್ರೀಯ ಯುದ್ಧ ಸ್ಮಾರಕದಲ್ಲಿ ಕೆತ್ತಲಾಗುವುದು ಎಂದು ಅಧಿಕಾರಿಗಳು ಗುರುವಾರ ತಿಳಿಸಿದರು.
ಸ್ಮಾರಕದಲ್ಲಿ ಹುತಾತ್ಮರ ಹೆಸರನ್ನು ಕೆತ್ತಿಸುವ ಪ್ರಕ್ರಿಯೆಗೆ ಕೆಲವು ತಿಂಗಳು ಬೇಕಾಗಬಹುದು ಎಂದು ಅವರು ಹೇಳಿದರು.
ಜೂ.15 ರಂದು ಗಾಲ್ವನ್ ಕಣಿವೆಯಲ್ಲಿ ಚೀನಾ ಮತ್ತುಭಾರತೀಯ ಸೇನೆ ನಡುವೆ ಹಲವು ಗಂಟೆಗಳ ಕಾಲ ಸಂಘರ್ಷ ನಡೆದಿತ್ತು. ಇದರಲ್ಲಿ ಕರ್ನಲ್ ಬಿ.ಸಂತೋಷ್ ಬಾಬು ಸೇರಿದಂತೆ 20 ಯೋಧರು ಹುತಾತ್ಮರಾದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.