ADVERTISEMENT

ಗಾಲ್ವನ್ ಸಂಘರ್ಷ: ‘ರಾಷ್ಟ್ರೀಯ ಯುದ್ಧ ಸ್ಮಾರಕ’ದಲ್ಲಿ ಹುತಾತ್ಮ ಯೋಧರ ಹೆಸರು

ಪಿಟಿಐ
Published 30 ಜುಲೈ 2020, 10:26 IST
Last Updated 30 ಜುಲೈ 2020, 10:26 IST
ರಾಷ್ಟ್ರೀಯ ಯುದ್ಧ ಸ್ಮಾರಕ
ರಾಷ್ಟ್ರೀಯ ಯುದ್ಧ ಸ್ಮಾರಕ   

ನವದೆಹಲಿ: ಲಡಾಖ್‌ನ ಗಾಲ್ವನ್‌ ಕಣಿವೆ ಬಳಿ ಚೀನಾದ ಸೇನೆಯೊಂದಿಗೆ ನಡೆದ ಸಂಘರ್ಷದಲ್ಲಿ ಹುತಾತ್ಮರಾದ 20 ಯೋಧರ ಹೆಸರನ್ನು ರಾಷ್ಟ್ರೀಯ ಯುದ್ಧ ಸ್ಮಾರಕದಲ್ಲಿ ಕೆತ್ತಲಾಗುವುದು ಎಂದು ಅಧಿಕಾರಿಗಳು ಗುರುವಾರ ತಿಳಿಸಿದರು.

ಸ್ಮಾರಕದಲ್ಲಿ ಹುತಾತ್ಮರ ಹೆಸರನ್ನು ಕೆತ್ತಿಸುವ ಪ್ರಕ್ರಿಯೆಗೆ ಕೆಲವು ತಿಂಗಳು ಬೇಕಾಗಬಹುದು ಎಂದು ಅವರು ಹೇಳಿದರು.

ಜೂ.15 ರಂದು ಗಾಲ್ವನ್‌ ಕಣಿವೆಯಲ್ಲಿ ಚೀನಾ ಮತ್ತುಭಾರತೀಯ ಸೇನೆ ನಡುವೆ ಹಲವು ಗಂಟೆಗಳ ಕಾಲ ಸಂಘರ್ಷ ನಡೆದಿತ್ತು. ಇದರಲ್ಲಿ ಕರ್ನಲ್‌ ಬಿ.ಸಂತೋಷ್‌ ಬಾಬು ಸೇರಿದಂತೆ 20 ಯೋಧರು ಹುತಾತ್ಮರಾದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.