ನವದೆಹಲಿ: ಭಾರತೀಯ ನೌಕಾಪಡೆ ದಿನಾಚರಣೆ ಪ್ರಯುಕ್ತ ಪ್ರಧಾನಿ ಮೋದಿ ಅವರು ನೌಕಾಪಡೆ ಸಿಬ್ಬಂದಿಗೆ ಶುಭಾಶಯ ಕೋರಿದ್ದಾರೆ.
ಈ ಕುರಿತು ವಿಡಿಯೊ ಟ್ವೀಟ್ ಮಾಡಿರುವ ಅವರು, ‘ಭಾರತೀಯ ನೌಕಾಪಡೆಯ ಅನುಕರಣೀಯ ಕೊಡುಗೆಗಳ ಬಗ್ಗೆ ನಾವು ಹೆಮ್ಮೆಪಡುತ್ತೇವೆ. ನೈಸರ್ಗಿಕ ವಿಕೋಪಗಳಂತಹ ಬಿಕ್ಕಟ್ಟಿನ ಸಂದರ್ಭಗಳನ್ನು ಎದುರಿಸುವಲ್ಲಿ ನಮ್ಮ ನೌಕಾಪಡೆಯ ಸಿಬ್ಬಂದಿ ಯಾವಾಗಲೂ ಮುಂಚೂಣಿಯಲ್ಲಿದ್ದಾರೆ‘ ಎಂದು ತಿಳಿಸಿದ್ದಾರೆ.
ಪಾಕಿಸ್ತಾನದ ವಿರುದ್ಧ 1971ರಲ್ಲಿ ನಡೆದ ಯುದ್ಧದಲ್ಲಿ ಕರಾಚಿಯ ನೌಕಾನೆಲೆಯ ಮೇಲೆ ಭಾರತೀಯ ನೌಕಾಪಡೆಯ ಕ್ಷಿಪಣಿ ವಾಹಕ ನೌಕೆಗಳು ದಾಳಿ ಮಾಡಿದ್ದವು. ಇದರಿಂದಪಾಕಿಸ್ತಾನವು ಸೋಲು ಕಂಡಿತ್ತು. ಇದರ ನೆನಪಿಗಾಗಿ ಪ್ರತಿ ವರ್ಷ ಡಿ.4ರಂದು ‘ನೌಕಾಪಡೆ ದಿನಾಚರಣೆ’ ಹಮ್ಮಿಕೊಳ್ಳಲಾಗುತ್ತದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.