ADVERTISEMENT

ಕರ್ನಾಟಕದ ಜನಾದೇಶ ಹಿಂಬಾಗಿಲಿಂದ ಕಳವು ಮಾಡಿದ್ದ ಕಾಂಗ್ರೆಸ್‌ಗೆ ಜನರಿಂದ ಪಾಠ: ಮೋದಿ

ಪಿಟಿಐ
Published 9 ಡಿಸೆಂಬರ್ 2019, 9:43 IST
Last Updated 9 ಡಿಸೆಂಬರ್ 2019, 9:43 IST
ಜಾರ್ಖಂಡ್‌ನ ಬರ್ಹಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಸೋಮವಾರ ಚುನಾವಣಾ ಪ್ರಚಾರ ಸಭೆ ಉದ್ದೇಶಿಸಿ ಮಾತನಾಡಿ
ಜಾರ್ಖಂಡ್‌ನ ಬರ್ಹಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಸೋಮವಾರ ಚುನಾವಣಾ ಪ್ರಚಾರ ಸಭೆ ಉದ್ದೇಶಿಸಿ ಮಾತನಾಡಿ   

ಬರ್ಹಿ:ಕರ್ನಾಟಕದಲ್ಲಿ ಜನಾದೇಶವನ್ನು ಹಿಂಬಾಗಿಲಿನ ಮೂಲಕ ಕಳವು ಮಾಡಿದ್ದ ಕಾಂಗ್ರೆಸ್‌ಗೆ ಮತದಾರರು ಉಪಚುನಾವಣೆಯಲ್ಲಿ ಪಾಠ ಕಲಿಸಿದ್ದಾರೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.

ಜಾರ್ಖಂಡ್‌ನ ಬರ್ಹಿಯಲ್ಲಿ ಸೋಮವಾರ ಚುನಾವಣಾ ಪ್ರಚಾರ ಸಭೆ ಉದ್ದೇಶಿಸಿ ಮಾತನಾಡಿದ ಅವರು, ‘ಕರ್ನಾಟಕದಲ್ಲಿ ಕಾಂಗ್ರೆಸ್‌ ಮತ್ತು ಅದರ ಮಿತ್ರ ಪಕ್ಷಗಳು ಜನಾದೇಶವನ್ನು ಧಿಕ್ಕರಿಸಿ ಸರ್ಕಾರ ರಚಿಸಿದ್ದವು. ಆದರೆ ಈಗ ನೆಲಕಚ್ಚಿವೆ’ ಎಂದು ಮೋದಿ ಹೇಳಿದರು.

ಕಾಂಗ್ರೆಸ್‌ ಕರ್ನಾಟಕದಲ್ಲಿ ಅಧಿಕಾರದಲ್ಲಿದ್ದಾಗ ಅಭಿವೃದ್ಧಿ ಅಜೆಂಡಾವನ್ನೇ ಹೊಂದಿರಲಿಲ್ಲ ಎಂದು ಅವರು ಟೀಕಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.