ನವದೆಹಲಿ: ಖ್ಯಾತ ವಕೀಲ, ಮಾಜಿ ಕೇಂದ್ರ ಸಚಿವ ರಾಮ್ ಜೇಠ್ಮಲಾನಿ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ.
ನ್ಯಾಯಾಲಯ ಮತ್ತು ಸಂಸತ್ಗೆ ಮಹತ್ವದ ಕೊಡುಗೆ ನೀಡಿದ್ದ ಅಸಾಧಾರಣ ವಕೀಲ ಮತ್ತು ಪ್ರಸಿದ್ಧ ವ್ಯಕ್ತಿಯಾಗಿದ್ದರು ರಾಮ್ ಜೇಠ್ಮಲಾನಿ. ಅವರು ಹಾಸ್ಯ ಪ್ರವೃತ್ತಿಯಿರುವ, ಧೈರ್ಯಶಾಲಿ ವ್ಯಕ್ತಿಯಾಗಿದ್ದು, ಯಾವುದೇ ವಿಷಯದ ಬಗ್ಗೆ ತಮ್ಮ ಅಭಿಪ್ರಾಯವನ್ನು ದಿಟ್ಟತನದಿಂದ ವ್ಯಕ್ತಪಡಿಸುತ್ತಿದ್ದರು ಎಂದು ಮೋದಿ ಟ್ವೀಟಿಸಿದ್ದಾರೆ.
ಇದನ್ನೂ ಓದಿ:ಹಿರಿಯನ್ಯಾಯವಾದಿ ರಾಮ್ಜೇಠ್ಮಲಾನಿ ನಿಧನ
ಜೇಠ್ಮಲಾನಿ ಭಾನುವಾರ ಬೆಳಗ್ಗೆ ಸ್ವಗೃಹದಲ್ಲಿ ನಿಧನರಾಗಿದ್ದು, ಸಂಜೆ ಅಂತಿಮ ಸಂಸ್ಕಾರ ನಡೆಯಲಿದೆ.
6 ಬಾರಿ ರಾಜ್ಯಸಭಾ ಸದಸ್ಯರಾಗಿದ್ದ ಅವರು ವಾಜಪೇಯಿ ನೇತೃತ್ವದ ಸರ್ಕಾರದಲ್ಲಿ ಕಾನೂನು ಮತ್ತು ನಗರಾಭಿವೃದ್ಧಿ ಸಚಿವರಾಗಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.