ADVERTISEMENT

ಪಾಕಿಸ್ತಾನಕ್ಕೆ ಹರಿಯುವ ನೀರನ್ನು ಹರಿಯಾಣದ ರೈತರಿಗೆ ಒದಗಿಸುವೆ: ಪ್ರಧಾನಿ ಮೋದಿ

ಹರಿಯಾಣದಲ್ಲಿ ಚುನಾವಣಾ ಪ್ರಚಾರದ ವೇಳೆ ಭರವಸೆ

ಏಜೆನ್ಸೀಸ್
Published 17 ಅಕ್ಟೋಬರ್ 2019, 10:49 IST
Last Updated 17 ಅಕ್ಟೋಬರ್ 2019, 10:49 IST
ಹರಿಯಾಣದಲ್ಲಿ ಚುನಾವಣಾ ಪ್ರಚಾರ ನಡೆಸಿದ ಪ್ರಧಾನಿ ನರೇಂದ್ರ ಮೋದಿ –ಪಿಟಿಐ ಚಿತ್ರ
ಹರಿಯಾಣದಲ್ಲಿ ಚುನಾವಣಾ ಪ್ರಚಾರ ನಡೆಸಿದ ಪ್ರಧಾನಿ ನರೇಂದ್ರ ಮೋದಿ –ಪಿಟಿಐ ಚಿತ್ರ   

ಚರಕೀ ದಾದರೀ (ಹರಿಯಾಣ):ಪಾಕಿಸ್ತಾನಕ್ಕೆ ನೀರು ಹರಿಸುವುದನ್ನು ನಿಲ್ಲಿಸಿ ಹರಿಯಾಣದ ರೈತರಿಗೆ ಒದಗಿಸುವುದಾಗಿ ಪ್ರಧಾನಿ ನರೇಂದ್ರ ಮೋದಿ ಭರವಸೆ ನೀಡಿದ್ದಾರೆ.

ಸಾರ್ವಜನಿಕ ರ್‍ಯಾಲಿ ಉದ್ದೇಶಿಸಿ ಮಾತನಾಡಿದ ಅವರು, ‘ಹರಿಯಾಣದ ರೈತರಿಗೆ ದೊರೆಯಬೇಕಾದ ನೀರು ಕಳೆದ 70 ವರ್ಷಗಳಿಂದ ಪಾಕಿಸ್ತಾನಕ್ಕೆ ಹರಿದುಹೋಗುತ್ತಿದೆ. ಆದರೆ, ಈ ಮೋದಿ ಅದನ್ನು ನಿಲ್ಲಿಸಿ ನಿಮ್ಮ ಮನೆಗೆ ಹರಿಯುವಂತೆ ಮಾಡಲಿದ್ದಾನೆ. ನಾನು ಈಗಾಗಲೇ ಆ ನಿಟ್ಟಿನಲ್ಲಿ ಕಾರ್ಯಪ್ರವೃತ್ತನಾಗಿದ್ದೇನೆ. ಈ ನೀರು ಭಾರತ ಮತ್ತು ಹರಿಯಾಣದ ರೈತರಿಗೆ ಸೇರಿದ್ದು. ಅದಕ್ಕಾಗಿಯೇ ಮೋದಿ ನಿಮಗಾಗಿ ಈ ಹೋರಾಟ ಮಾಡುತ್ತಿದ್ದಾನೆ’ ಎಂದು ಹೇಳಿದ್ದಾರೆ.

ಜಮ್ಮು–ಕಾಶ್ಮೀರದ ವಿಶೇಷ ಸ್ಥಾನಮಾನ ರದ್ದು ಮಾಡುವ ಸಂದರ್ಭ ಕಾಂಗ್ರೆಸ್ ನಾಯಕರು ಅದನ್ನು ವಿರೋಧಿಸಿದರು. ದೇಶದಲ್ಲಿ ಮತ್ತು ವಿಶ್ವದಾದ್ಯಂತ ವದಂತಿಗಳನ್ನು ಹಬ್ಬಿಸಿಸಿದರು ಎಂದು ಮೋದಿ ಆರೋಪಿಸಿದ್ದಾರೆ.

ADVERTISEMENT

ವಿಶೇಷ ಸ್ಥಾನಮಾನ ರದ್ದುಗೊಳಿಸಿದ್ದರಿಂದಾಗಿ ಜಮ್ಮು–ಕಾಶ್ಮೀರವು ದೇಶದ ಇತರ ಪ್ರದೇಶಗಳ ಜತೆ ಒಂದಾಗಿದೆ ಎಂದು ಸಮರ್ಥಿಸಿದ ಮೋದಿ, ಇನ್ನು ಆ ರಾಜ್ಯದಲ್ಲಿ ಅಭಿವೃದ್ಧಿಯ ವೇಗ ಕಾಣಲಿದೆ ಎಂದು ಹೇಳಿದ್ದಾರೆ.

Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.