ರೈತನಾಯಕ ರಾಕೇಶ್ ಟಿಕಾಯತ್
ಪಿಟಿಐ ಚಿತ್ರ
ಮುಜಾಫರ್ನಗರ: ಭಾರತೀಯ ಕಿಸಾನ್ ಒಕ್ಕೂಟದ (ಬಿಕೆಯು) ರಾಷ್ಟ್ರೀಯ ವಕ್ತಾರ ಹಾಗೂ ರೈತ ನಾಯಕ ರಾಕೇಶ್ ಟಿಕಾಯತ್ ಅವರ ಕಾರಿಗೆ ನೀಲ್ಗಾಯ್ ಡಿಕ್ಕಿಯಾಗಿದೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ.
ಜಿಲ್ಲೆಯ ಮೀರ್ಪುರ ಬೈಪಾಸ್ ರಸ್ತೆಯಲ್ಲಿ ತೆರಳುತ್ತಿದ್ದಾಗ ಟಿಕಾಯತ್ ಕಾರಿನ ಮುಂಭಾಗಕ್ಕೆ ನೀಲ್ಗಾಯ್ ಡಿಕ್ಕಿಯಾಗಿದೆ. ಈ ವೇಳೆ ಟಿಕಾಯತ್ ಅವರಿಗೆ ಯಾವುದೇ ಅಪಾಯವಾಗಿಲ್ಲ.
ಉತ್ತರ ಪ್ರದೇಶ ಸಚಿವ ಕಪಿಲ್ ದೇವ್ ಅಗರ್ವಾಲ್ ಹಾಗೂ ಮುಜಾಫರ್ನಗರ ಸಂಸದ ಹರೇಂದ್ರ ಸಿಂಗ್ ಮಲಿಕ್ ಅವರು ವಿಷಯ ತಿಳಿಯುತ್ತಿದ್ದಂತೆ ಟಿಕಾಯತ್ ಅವರ ಮನೆಗೆ ತೆರಳಿ ಯೋಗಕ್ಷೇಮ ವಿಚಾರಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.