ನವದೆಹಲಿ: ರಾಷ್ಟ್ರೀಯ ವೈದ್ಯರ ದಿನದ ಅಂಗವಾಗಿ ಎಲ್ಲ ವೈದ್ಯಕೀಯ ಸಿಬ್ಬಂದಿಗೆ ಶುಭ ಕೋರಿರುವರಾಷ್ಟ್ರಪತಿ ರಾಮನಾಥ ಕೋವಿಂದ್ ಅವರು,ಕೊರೊನಾ ಸಂದರ್ಭದಲ್ಲಿ ವೈದ್ಯರು ನಿಸ್ವಾರ್ಥ ಸೇವೆ ಸಲ್ಲಿಸುತ್ತಿದ್ದಾರೆ ಎಂದು ಕೃತಜ್ಞತೆ ಸಲ್ಲಿಸಿದ್ದಾರೆ.
ಟ್ಟಿಟರ್ ಮೂಲಕ ವೈದ್ಯರಿಗೆಲ್ಲರಿಗೂ ಶುಭಾಶಯ ಕೋರಿರುವ ರಾಷ್ಟ್ರಪತಿ ಅವರು, ‘ಕೋವಿಡ್ ಸಂಧರ್ಭದಲ್ಲಿ ದೇಶಕ್ಕಾಗಿ ನೀವು ಶ್ರಮಿಸಿದ್ದೀರಿ. ನಿಮ್ಮ ನಿಸ್ವಾರ್ಥ ಸೇವೆಗೆ ನಾವು ಕೃತಜ್ಞರಾಗಿದ್ದೇವೆ. ನಿಮ್ಮ ಸೇವೆ, ತ್ಯಾಗಕ್ಕೆ ನಮ್ಮ ಸಲಾಂ’ ಎಂದು ಬರೆದುಕೊಂಡಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.