ನವದೆಹಲಿ:1971ರ ಯುದ್ಧದಲ್ಲಿ ಸೈನಿಕರು ಮಾಡಿದ ತ್ಯಾಗ, ಎಲ್ಲಾ ಭಾರತೀಯರಿಗೆ ಸ್ಫೂರ್ತಿಯಾಗಿದೆ. ದೇಶವು ಅವರನ್ನು ಸದಾ ನೆನಪಿಸಿಕೊಳ್ಳುತ್ತದೆ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಬುಧವಾರ ಹೇಳಿದರು.
1971ರ ಡಿಸೆಂಬರ್ 16ರಂದು ಪಾಕಿಸ್ತಾನದ ವಿರುದ್ಧ ಭಾರತ ವಿಜಯ ಸಾಧಿಸಿತು. ಈ ಪ್ರಯುಕ್ತ ದೇಶದಾದ್ಯಂತ ಡಿಸೆಂಬರ್ 16 ಅನ್ನು ‘ವಿಜಯ ದಿನ’ ಎಂದು ಆಚರಿಸಲಾಗುತ್ತದೆ. ಇದೇ ದಿನ ಬಾಂಗ್ಲಾದೇಶ ಕೂಡ ರೂಪುಗೊಂಡಿತು.
‘ಇಂದು ‘ವಿಜಯ ದಿನ’ದ ಸಂದರ್ಭದಲ್ಲಿ ನಾನು ಭಾರತೀಯ ಸೇನೆಯ ಧೈರ್ಯ ಮತ್ತು ಶೌರ್ಯಕ್ಕೆ ವಂದಿಸುತ್ತೇನೆ. 1971ರ ಯುದ್ಧದಲ್ಲಿ ಸೈನಿಕರು ತಮ್ಮ ಶೌರ್ಯದ ಹೊಸ ಕಥೆಯನ್ನು ಬರೆದಿದ್ದಾರೆ’ ಎಂದು ರಾಜನಾಥ್ ಸಿಂಗ್ ಟ್ವೀಟ್ ಮಾಡಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.