ADVERTISEMENT

ವಿರಳ ಕಾಯಿಲೆಗಳ ಚಿಕಿತ್ಸೆಗೆ ಹೊಸ ನೀತಿ

ಪಿಟಿಐ
Published 14 ಜನವರಿ 2020, 19:49 IST
Last Updated 14 ಜನವರಿ 2020, 19:49 IST

ನವದೆಹಲಿ : ಅಪರೂಪದ ಕಾಯಿಲೆಗಳಿಂದ ಬಳಲುತ್ತಿರುವವರಿಗಾಗಿ ರಾಷ್ಟ್ರೀಯ ಆರೋಗ್ಯ ನಿಧಿ ಯೋಜನೆ ಅಡಿ ₹ 15 ಲಕ್ಷದವರೆಗೆ ಹಣಕಾಸು ನೆರವನ್ನು ಕೇಂದ್ರ ಸರ್ಕಾರ ನೀಡಲಿದೆ. ಈ ಕುರಿತು ನೂತನ ನೀತಿಯ ಕರಡನ್ನು ಸಿದ್ಧಪಡಿಸಿದೆ.

ವೈದ್ಯಕೀಯ ವಿಜ್ಞಾನಕ್ಕೆ ಸವಾಲಾಗಿರುವ ಕಾಯಿಲೆಗಳ ವಿರುದ್ಧ ಹೋರಾಡುತ್ತಿರುವವರ ಚಿಕಿತ್ಸೆಗಾಗಿ ‘ವಿರಳ ಕಾಯಿಲೆಗಳ ರಾಷ್ಟ್ರೀಯ ನೀತಿ’ ಕರಡನ್ನು ಬಿಡುಗಡೆ ಮಾಡಿದ್ದು, ಬಡತನ ರೇಖೆಗಿಂತ ಕೆಳಗಿರುವ (ಬಿಪಿಎಲ್‌) ಕಾರ್ಡುದಾರರು ಸೌಲಭ್ಯ ಪಡೆಯಬಹುದು ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT