ನವದೆಹಲಿ: ‘ಪಾಕಿಸ್ತಾನದ ಬಗ್ಗೆ ಪದೇ ಪದೇ ಪ್ರೀತಿ ಪ್ರದರ್ಶಿಸುತ್ತಿರುವ ಪಂಜಾಬ್ ಸಚಿವ ನವಜೋತ್ ಸಿಂಗ್ ಸಿಧು ಆ ದೇಶದ ಸಚಿವ ಸಂಪುಟಕ್ಕೆ ಸೇರ್ಪಡೆಯಾಗಲಿ’ ಎಂದು ಬಿಜೆಪಿ ವಕ್ತಾರ ಸಂಬಿತ್ ಪಾತ್ರಾ ವ್ಯಂಗ್ಯವಾಡಿದ್ದಾರೆ.
ಆಹಾರ ಮತ್ತು ಭಾಷೆ ವಿಚಾರದಲ್ಲಿ ದಕ್ಷಿಣ ಭಾರತಕ್ಕಿಂತ ಪಾಕಿಸ್ತಾನವೇ ಉತ್ತಮ ಎಂದು ಸಿಧು ಹೇಳಿದ್ದರು.
ಈ ಹೇಳಿಕೆಗೆ ಪ್ರತಿಕ್ರಿಯಿಸಿರುವ ಪಾತ್ರಾ, ‘ಇಮ್ರಾನ್ ಖಾನ್ ಅವರ ಜತೆ ಸಿಧು ಕಾರ್ಯನಿರ್ವಹಿಸಲಿ. ಇದಕ್ಕಾಗಿ ಅವರು ಆ ದೇಶಕ್ಕೆ ತೆರಳಲಿ. ಪದೇ ಪದೇ ಪಾಕಿಸ್ತಾನದ ಬಗ್ಗೆ ಒಲವು ತೋರುತ್ತಿರುವುದು ಸಹ ಒಂದು ಸಂಚು. ಉತ್ತರ ಮತ್ತು ದಕ್ಷಿಣ ಭಾರತ ಎಂದು ವಿಭಜಿಸುವ ಮನಸ್ಥಿತಿಯನ್ನು ಇದು ತೋರಿಸುತ್ತದೆ. ಕಾಂಗ್ರೆಸ್ ಸಹ ಇದೇ ಕಾರ್ಯತಂತ್ರವನ್ನು ಅನುಸರಿಸುತ್ತದೆ’ ಎಂದು ಟೀಕಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.