ADVERTISEMENT

ದುರಹಂಕಾರಿ ದೊರೆ: ಅಮರಿಂದರ್‌ ಸಿಂಗ್ ವಿರುದ್ಧ ನವಜೋತ್ ಸಿಧು ವಾಗ್ದಾಳಿ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 20 ಡಿಸೆಂಬರ್ 2021, 14:32 IST
Last Updated 20 ಡಿಸೆಂಬರ್ 2021, 14:32 IST
ನವಜೋತ್‌ ಸಿಂಗ್‌ ಸಿಧು ಮತ್ತು ಕ್ಯಾಪ್ಟನ್ ಅಮರಿಂದರ್ ಸಿಂಗ್
ನವಜೋತ್‌ ಸಿಂಗ್‌ ಸಿಧು ಮತ್ತು ಕ್ಯಾಪ್ಟನ್ ಅಮರಿಂದರ್ ಸಿಂಗ್   

ಚಂಡೀಗಡ: ಪಂಜಾಬ್‌ನ ಮಾಜಿ ಮುಖ್ಯಮಂತ್ರಿ ಕ್ಯಾಪ್ಟನ್ ಅಮರಿಂದರ್ ಸಿಂಗ್ ಅವರನ್ನು ‘ದುರಹಂಕಾರಿ ದೊರೆ‘ ಎಂದು ಕಾಂಗ್ರೆಸ್‌ ನಾಯಕ ನವಜೋತ್‌ ಸಿಂಗ್‌ ಸಿಧು ಟೀಕಿಸಿದ್ದಾರೆ.ಈ ಕುರಿತು ಸುದ್ದಿಸಂಸ್ಥೆ ‘ಎಎನ್‌ಐ’ ಟ್ವೀಟಿಸಿದೆ.

ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡಿರುವ ಅಮರಿಂದರ್‌ ಸಿಂಗ್‌ ವಿರುದ್ಧ ವಾಗ್ದಾಳಿ ನಡೆಸಿರುವ ಸಿಧು ‘ನನಗೆ ಬಾಗಿಲು ಮುಚ್ಚಲಾಗಿದೆ ಎಂದು ಕ್ಯಾಪ್ಟನ್(ಅಮರಿಂದರ್ ಸಿಂಗ್‌) ಹೇಳಿದ್ದಾರೆ. ಆದರೆ, ಅವರು ತಮ್ಮ ಮನೆಯಲ್ಲಿ ಕುಳಿತು ಪ್ರಧಾನಿ ಮೋದಿಯವರ ಪಾದಗಳನ್ನು ನೆಕ್ಕುತ್ತಿದ್ದಾರೆ‘ ಎಂದು ಹೇಳಿದ್ದಾರೆ.

ಮುಂಬರುವ ಪಂಜಾಬ್‌ ವಿಧಾನಸಭಾ ಚುನಾವಣೆಯಲ್ಲಿ ಅಮರಿಂದರ್ ಸಿಂಗ್ ಅವರ 'ಪಂಜಾಬ್ ಲೋಕ ಕಾಂಗ್ರೆಸ್' ಜೊತೆ ಮೈತ್ರಿ ಮಾಡಿಕೊಂಡು ಸ್ಪರ್ಧಿಸುವುದಾಗಿ ಬಿಜೆಪಿ ಘೋಷಿಸಿತ್ತು.

ADVERTISEMENT

ಕಾಂಗ್ರೆಸ್‌ ತೊರೆದ ನಂತರ ಅಮರಿಂದರ್‌ ಸಿಂಗ್‌ ಅವರು ‘ಪಂಜಾಬ್‌ ಲೋಕ ಕಾಂಗ್ರೆಸ್‌‘ ಅನ್ನು ಸ್ಥಾಪಿಸಿದ್ದರು. ಪಂಜಾಬ್‌ ಚುನಾವಣೆಯಲ್ಲಿ ಈ ಮೈತ್ರಿಕೂಟವು ಗೆಲುವು ಸಾಧಿಸಲಿದೆ ಎಂಬ ಭರವಸೆಯನ್ನೂ ವ್ಯಕ್ತಪಡಿಸಿದ್ದರು.

ಮುಂದಿನ ವರ್ಷದ ಆರಂಭದಲ್ಲಿ ಪಂಜಾಬ್‌ನಲ್ಲಿ ವಿಧಾನಸಭೆ ಚುನಾವಣೆ ನಡೆಯುವ ನಿರೀಕ್ಷೆಯಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.