ರಾಯಪುರ: ಛತ್ತೀಸ್ಗಡದ ದಾಂತೇವಾಡದಲ್ಲಿ ಭದ್ರತಾಪಡೆಗಳು ನಡೆಸಿದ ಗುಂಡಿನ ಕಾಳಗದಲ್ಲಿ ಇಬ್ಬರು ನಕ್ಸಲರು ಮೃತಪಟ್ಟಿದ್ದಾರೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ.
ಜಿಲ್ಲಾ ಮೀಸಲು ಪಡೆ ಬಂಡುಕೋರರ ನಿಗ್ರಹದ ಸಲುವಾಗಿ ನಡೆಸಿದ ಕಾರ್ಯಾಚರಣೆ ವೇಳೆ ಮುಂಡಾ ಎಂಬ ಹಳ್ಳಿಯಲ್ಲಿಗುಂಡಿನ ಚಕಮಕಿ ನಡೆಯಿತು. ದಾಳಿ ನಿಂತ ಬಳಿಕ ಇಬ್ಬರು ನಕ್ಸಲರ ಮೃತ ದೇಹಗಳನ್ನು ಗುರುತಿಸಲಾಗಿದೆ. ಅಲ್ಲದೆ ಸ್ಥಳದಲ್ಲಿ ಶಸ್ತ್ರಾಸ್ತ್ರಗಳೂ ಕಂಡು ಬಂದವು. ಈ ಪ್ರದೇಶದಲ್ಲಿ ಗಸ್ತು ಕಾರ್ಯಾಚರಣೆ ತೀವ್ರಗೊಳಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.