ADVERTISEMENT

ಛತ್ತೀಸಗಡ: ಗಣಿ ಪ್ರದೇಶದಲ್ಲಿ ನಕ್ಸಲರ ದಾಳಿ, ನಾಲ್ಕು ವಾಹನಗಳಿಗೆ ಬೆಂಕಿ

ಪಿಟಿಐ
Published 3 ಜುಲೈ 2021, 11:04 IST
Last Updated 3 ಜುಲೈ 2021, 11:04 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ನಾರಾಯಣಪುರ: ಛತ್ತೀಸಗಡದ ನಾರಾಯಣಪುರ ಜಿಲ್ಲೆಯಲ್ಲಿ ಕಬ್ಬಿಣ ಅದಿರು ಗಣಿಯೊಂದರ ಮೇಲೆ ನಕ್ಸಲರು ಶನಿವಾರ ದಾಳಿ ನಡೆಸಿದ್ದು, ರಸ್ತೆ ನಿರ್ಮಾಣ ಕಾಮಗಾರಿಯಲ್ಲಿ ತೊಡಗಿದ್ದ ನಾಲ್ಕು ವಾಹನಗಳಿಗೆ ಬೆಂಕಿ ಹಚ್ಚಿದ್ದಾರೆ.

‘ಈ ಘಟನೆಯಲ್ಲಿ ಗಣಿಯ ಇಬ್ಬರು ಉದ್ಯೋಗಿಗಳು ನಾಪತ್ತೆಯಾಗಿದ್ದಾರೆ’ ಎಂದು ಅಧಿಕಾರಿಗಳು ತಿಳಿಸಿದರು.

‘ಛೋಟೆ ದೊಂಗರ್‌ ಪೊಲೀಸ್‌ ಠಾಣೆ ವ್ಯಾಪ್ತಿಯ ಆಮ್‌ದಾಯಿ ಕಬ್ಬಿಣ ಅದಿರು ಗಣಿಯಲ್ಲಿ ಈ ದಾಳಿ ನಡೆದಿದೆ’ ಎಂದು ನಾರಾಯಣಪುರದ ಪೊಲೀಸ್‌ ವರಿಷ್ಠಾಧಿಕಾರಿ ಮೋಹಿತ್‌ ಗರ್ಗ್‌ ಮಾಹಿತಿ ನೀಡಿದರು.

ADVERTISEMENT

‘ಈ ಬಗ್ಗೆ ಮಾಹಿತಿ ಸಿಗುತ್ತಿದ್ದಂತೆ ಭದ್ರತಾ ಪಡೆಯು ಘಟನಾ ಸ್ಥಳಕ್ಕೆ ತೆರಳಿದೆ. ಈ ವೇಳೆ ನಕ್ಸಲರು ಮತ್ತು ಭದ್ರತಾ ಸಿಬ್ಬಂದಿಯ ನಡುವೆ ಗುಂಡಿನ ಚಕಮಕಿ ನಡೆದಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಲಭ್ಯವಿಲ್ಲ’ ಎಂದು ಅವರು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.