ಮುಂಬೈ: ಮರಾಠಿ ಚಲನಚಿತ್ರವಾದ ‘ಹರ್ ಹರ್ ಮಹಾದೇವ್’ ಪ್ರದರ್ಶನಕ್ಕೆ ಅಡ್ಡಿಪಡಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಷನಲಿಸ್ಟ್ ಕಾಂಗ್ರೆಸ್ ಪಕ್ಷದ (ಎನ್ಸಿಪಿ) ಮುಖಂಡ ಜಿತೇಂದ್ರ ಅವ್ಹಾದ್ ಹಾಗೂ ಅವರ ಒಂಬತ್ತು ಮಂದಿ ಬೆಂಬಲಿಗರನ್ನು ಶುಕ್ರವಾರ ಬಂಧಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ಹೇಳಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಜಿತೇಂದ್ರ ಅವರು, ‘ವರ್ತಕ್ ನಗರದ ಪೊಲೀಸ್ ಠಾಣೆಯ ಅಧಿಕಾರಿಗಳು ಶುಕ್ರವಾರ ಮಧ್ಯಾಹ್ನ ನನಗೆ ಸಮನ್ಸ್ ನೀಡಿ, ಬಂಧಿಸಿದರು’ ಎಂದು ತಿಳಿಸಿದ್ದಾರೆ.
ಛತ್ರಪತಿ ಶಿವಾಜಿ ಮಹಾರಾಜರ ಚರಿತ್ರೆಯನ್ನು ವಿರೂಪಗೊಳಿಸಲಾಗಿದೆಯೆಂದು ಆರೋಪಿಸಿ,ಜಿತೇಂದ್ರ ಮತ್ತು ಅವರ ಬೆಂಬಲಿಗರುನವೆಂಬರ್ 7ರಂದು ಠಾಣೆಯಲ್ಲಿನ ಮಲ್ಟಿಪ್ಲೆಕ್ಸ್ ಚಿತ್ರಮಂದಿರವೊಂದರಲ್ಲಿ ಚಿತ್ರದ ಪ್ರದರ್ಶನಕ್ಕೆ ಅಡ್ಡಿಪಡಿಸಿದ್ದರು. ಇದನ್ನು ವಿರೋಧಿಸಿದ ಪ್ರೇಕ್ಷಕರ ಮೇಲೂ ಹಲ್ಲೆ ನಡೆಸಿದ್ದರು. ಈ ಕುರಿತು ವರ್ತಕ್ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.