ಮುಂಬೈ: ಎನ್ಸಿಪಿ ನಾಯಕ ಹಾಗೂ ಮಾಜಿ ಉಪಮುಖ್ಯಮಂತ್ರಿ ಅಜಿತ್ ಪವಾರ್ ಅವರು ಮಹಾರಾಷ್ಟ್ರ ವಿಧಾನಸಭೆಯ ವಿರೋಧ ಪಕ್ಷದ ನಾಯಕರಾಗಿ ಸೋಮವಾರ ಆಯ್ಕೆಯಾಗಿದ್ದಾರೆ.
ಸದ್ಯ ಮಹಾರಾಷ್ಟ್ರ ಮುಖ್ಯಮಂತ್ರಿಯಾಗಿರುವಏಕನಾಥ ಶಿಂಧೆ ನೇತೃತ್ವದಲ್ಲಿ ಹಲವು ಶಾಸಕರು ಇತ್ತೀಚೆಗೆ ಬಂಡಾಯ ಘೋಷಿಸಿದ್ದರು. ಇದಾದ ಬಳಿಕಎನ್ಸಿಪಿ, ಶಿವಸೇನಾ ಹಾಗೂ ಕಾಂಗ್ರೆಸ್ ಪಕ್ಷಗಳನ್ನೊಳಗೊಂಡ 'ಮಹಾ ವಿಕಾಸ ಆಘಾಡಿ' ಮೈತ್ರಿಕೂಟದ ಸರ್ಕಾರ ಪತನಗೊಂಡಿತ್ತು. ಹೀಗಾಗಿ, 31 ತಿಂಗಳು ಮುಖ್ಯಮಂತ್ರಿಯಾಗಿದ್ದಶಿವಸೇನಾ ಮುಖ್ಯಸ್ಥಉದ್ಧವ್ ಠಾಕ್ರೆ ಜೂನ್ 30ರಂದು ಸಿಎಂ ಸ್ಥಾನದಿಂದ ಕೆಳಗಿಳಿದಿದ್ದರು. ಇದೀಗ ಬಿಜೆಪಿ ಬೆಂಬಲದೊಂದಿಗೆ ಶಿಂಧೆ ಮುಖ್ಯಮಂತ್ರಿಯಾಗಿದ್ದಾರೆ.
ಈ ಬೆಳವಣಿಗೆಗಳ ಬಳಿಕ ಪ್ರಬಲ ಹಾಗೂ ಅನುಭವಿಯನ್ನು ವಿರೋಧ ಪಕ್ಷದ ನಾಯಕನನ್ನಾಗಿ ಆಯ್ಕೆ ಮಾಡಲು ವಿಪಕ್ಷಗಳು ನಿರ್ಧರಿಸಿದ್ದವು.
ಬಿ.ಕಾಂ ಪದವೀಧರ ಆಗಿರುವ ಅಜಿತ್ ಪವಾರ್, ಎನ್ಸಿಪಿ ಅಧ್ಯಕ್ಷ ಶರದ್ ಪವಾರ್ ಅವರ ಸಂಬಂಧಿಯೂ ಹೌದು.
62 ವರ್ಷದ ಪವಾರ್, ಶಿಂಧೆ ಹಾಗೂ ಬಿಜೆಪಿ ನೇತೃತ್ವದ ಸರ್ಕಾರದ ವಿರುದ್ಧ ಎನ್ಸಿಪಿ, ಕಾಂಗ್ರೆಸ್, ಶಿವಸೇನಾ ಹಾಗೂ ಇತರ ವಿರೋಧ ಪಕ್ಷಗಳ ಗುಂಪನ್ನು ಮುನ್ನಡೆಸಲಿದ್ದಾರೆ.
ಇವನ್ನೂ ಓದಿ
*ಶಿವಸೇನಾ ನಾಯಕನ ಸ್ಥಾನದಿಂದ ಶಿಂಧೆಯನ್ನು ಉಚ್ಛಾಟನೆ ಮಾಡಿದ ಠಾಕ್ರೆ
*'ಹೌದು, ನಮ್ಮದು ಇ.ಡಿ ಸರ್ಕಾರ' - ಫಡಣವೀಸ್ ಹೇಳಿಕೆಯ ಮರ್ಮವೇನು?
*ವಿಶ್ವಾಸಮತ ಗೆದ್ದ ಶಿಂಧೆ: ಮುಖ್ಯಮಂತ್ರಿ ಸ್ಥಾನ ಭದ್ರ
*ಮಹಾರಾಷ್ಟ್ರ: ಅಷ್ಟಕ್ಕೂ ಬಿಜೆಪಿ ಏಕನಾಥ ಶಿಂಧೆಗೆ ಮಹಾ ಸಿಎಂ ಪಟ್ಟ ಕಟ್ಟಿದ್ದು ಏಕೆ?
*ಏಕನಾಥ ಶಿಂಧೆ ಮಹಾರಾಷ್ಟ್ರದ ಹೊಸ ಮುಖ್ಯಮಂತ್ರಿ: ಇಂದು ಸಂಜೆ ಪ್ರಮಾಣವಚನ
*ಮಹಾರಾಷ್ಟ್ರ ಬಿಕ್ಕಟ್ಟು: ಮುಖ್ಯಮಂತ್ರಿ ಸ್ಥಾನಕ್ಕೆ ಉದ್ಧವ್ ಠಾಕ್ರೆ ರಾಜೀನಾಮೆ
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.