ನವದೆಹಲಿ: ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಅವರ ಮೇಲೆ ಬಲಪ್ರಯೋಗ ಮಾಡಿದ್ದ ಘಟನೆಗೆ ಸಂಬಂಧಿಸಿ ರಾಷ್ಟ್ರೀಯ ಮಹಿಳಾ ಆಯೋಗ (ಎನ್ಸಿಡಬ್ಲ್ಯೂ) ಉತ್ತರ ಪ್ರದೇಶದ ಪೊಲೀಸರಿಗೆ ವಿವರಣೆ ಕೇಳಿದೆ.
ಈ ಕುರಿತು ಟ್ವೀಟ್ ಮಾಡಿರುವ ಆಯೋಗವು, ‘ಇದೊಂದು ಸೂಕ್ಷ್ಮತೆ ಕಳೆದುಕೊಂಡ ವರ್ತನೆ. ಇಂಥ ಬೆಳವಣಿಗೆಯನ್ನು ಒಪ್ಪಲು ಸಾಧ್ಯವಿಲ್ಲ’ ಎಂದು ಹೇಳಿದೆ. ‘ಈ ಪ್ರಕರಣದ ಸೂಕ್ಷ್ಮತೆಯ ಹಿನ್ನೆಲೆಯಲ್ಲಿ ಅಧ್ಯಕ್ಷೆ ಶರ್ಮಾರೇಖಾ ಅವರು ಉತ್ತರಪ್ರದೇಶದ ಪೊಲೀಸ್ ವರಿಷ್ಠರಿಂದ ವಿವರಣೆ ಬಯಸಿದ್ದಾರೆ’ ಎಂದು ತಿಳಿಸಿದೆ.
ಹಾಥರಸ್ ಸಂತ್ರಸ್ತೆ ಕುಟುಂಬ ಸದಸ್ಯರ ಭೇಟಿಗೆ ಪ್ರಿಯಾಂಕಾ ಗಾಂಧಿ ತೆರಳುವಾಗ ದೆಹಲಿ ಮತ್ತು ಉತ್ತರಪ್ರದೇಶ ಗಡಿಯಲ್ಲಿ ಪೊಲೀಸರ ಜೊತೆಗೆ ಜಟಾಪಟಿ ಆಗಿತ್ತು. ಕಾಂಗ್ರೆಸ್ ಕಾರ್ಯಕರ್ತರು ಸಾಕಷ್ಟು ಸಂಖ್ಯೆಯಲ್ಲಿದ್ದು, ಈ ಹಂತದಲ್ಲಿ ಪೊಲೀಸರು ಪ್ರಿಯಾಂಕಾ ಅವರನ್ನು ಎಳೆದಾಡಿದ್ದರು ಎನ್ನಲಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.