ADVERTISEMENT

ಅತ್ಯಾಚಾರ ಪ್ರಕರಣ: ಠಾಣೆಯಲ್ಲೇ ಬೆಂಕಿ ಹಚ್ಚಿಕೊಂಡ ಸಂತ್ರಸ್ತೆ

ಪಿಟಿಐ
Published 29 ಜುಲೈ 2019, 20:06 IST
Last Updated 29 ಜುಲೈ 2019, 20:06 IST
   

ಜೈಪುರ: ತನ್ನ ಮೇಲೆ ಅತ್ಯಾಚಾರ ಎಸಗಿದ ಗಂಡನ ಸಂಬಂಧಿಕನನ್ನು ಬಂಧಿಸಬೇಕೆಂದು ಆಗ್ರಹಿಸಿದ ಮಹಿಳೆ ನ್ಯಾಯಕ್ಕಾಗಿ ಒತ್ತಾಯಿಸಿ ಪೊಲೀಸ್ ಠಾಣೆ ಆವರಣದಲ್ಲೇ ಬೆಂಕಿ ಹಚ್ಚಿಕೊಂಡು ಸಾವನ್ನಪ್ಪಿದ ಘಟನೆ ಜೈಪುರದಲ್ಲಿ ನಡೆದಿದೆ.

36 ವರ್ಷದ ಮಹಿಳೆ, 2015ರಲ್ಲಿ ತನ್ನ ಮೇಲೆ ಗಂಡನ ಸಂಬಂಧಿಕ ರವೀಂದ್ರ ಸಿಂಗ್ ಎನ್ನುವಾತ ಅತ್ಯಾಚಾರ ಎಸಗಿದ್ದಾನೆಂದು ಆರೋಪಿಸಿ, ಜೂನ್ 5ರಂದು ವೈಶಾಲಿ ನಗರ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಎಫ್‌ಐಆರ್ ದಾಖಲಾದ ಬಳಿಕವೂ ಪೊಲೀಸರು ಆರೋಪಿಸಿದ ಮಹಿಳೆ, ಠಾಣೆಯ ಗೇಟಿನ ಬಳಿ ಬೆಂಕಿ ಹಚ್ಚಿಕೊಂಡರು.

ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಸೋಮವಾರ ಬೆಳಿಗ್ಗೆ ಮೃತಪಟ್ಟರು ಎಂದು ಪೊಲೀಸರು ತಿಳಿಸಿದ್ದಾರೆ. ಈ ಕುರಿತು ತನಿಖೆ ಕೈಗೊಳ್ಳಲು ರಾಷ್ಟ್ರೀಯ ಮಹಿಳಾ ಆಯೋಗ ಸೋಮವಾರ ಜೈಪುರಕ್ಕೆ ತಂಡವನ್ನು ಕಳುಹಿಸಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.