ADVERTISEMENT

ದೇಶದೆಲ್ಲೆಡೆ ಭರದಿಂದ ಸಾಗಿರುವ ಮತಎಣಿಕೆ, ಎನ್‌‌ಡಿಎ ಮುನ್ನಡೆ

​ಪ್ರಜಾವಾಣಿ ವಾರ್ತೆ
Published 23 ಮೇ 2019, 4:06 IST
Last Updated 23 ಮೇ 2019, 4:06 IST
   

ಬೆಂಗಳೂರು:ದೇಶದೆಲ್ಲೆಡೆ ಮತ ಎಣಿಕೆ ಆರಂಭವಾಗಿದ್ದು, ಎನ್‌‌ಡಿಎ ಮೈತ್ರಿಕೂಟ ಮುಂದಿದ್ದು, ಯುಪಿಎ ಹಿಂದಿದೆ.

ದೇಶದೆಡ್ಡೆ ಗಮನ ಸೆಳೆದಿರುವ ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿಮೊದಲ ಸುತ್ತಿನ ಎಣಿಕೆ ಕಾರ್ಯ ಮುಗಿದಿದ್ದು ನಿಖಿಲ್ 800 ಮತಗಳ ಅಂತರದಲ್ಲಿ ಹಿಂದಿದ್ದಾರೆ ಎನ್ನಲಾಗಿದೆ. ತುಮಕೂರಿನಲ್ಲಿ ದೇವೇಗೌಡ ಅವರು 1050 ಮತಗಳಿಂದ ಹಿಂದಿದ್ದಾರೆ. ಮಂಗಳೂರಿನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಮಿಥುನ್ ರೈ ಮುಂದಿದ್ದು, ಉತ್ತರ ಪ್ರದೇಶದಲ್ಲಿ ಬಿಜೆಪಿಯ ರಾಜನಾಥಸಿಂಗ್ ಪ್ರತಿಸ್ಪರ್ಧಿಗಿಂತ ಮುಂದಿದ್ದಾರೆ.

ರಾಜ್ಯದಲ್ಲಿ 21 ಕ್ಷೇತ್ರಗಳಲ್ಲಿ ಬಿಜೆಪಿ ಮುನ್ನಡೆ ಕಾಯ್ದುಕೊಂಡಿದೆ. ಚಾಮರಾಜನಗರ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಹಿಂದಿದ್ದು, ಪ್ರತಿಸ್ಪರ್ಧಿ ಬಿಜೆಪಿಯ ಶ್ರೀನಿವಾಸ ಪ್ರಸಾದ್ ಮುಂದಿದ್ದಾರೆ. ಬೆಂಗಳೂರು ಉತ್ತರ ಕ್ಷೇತ್ರದಲ್ಲಿ ಕೃಷ್ಣ ಬೈರೇಗೌಡ 1500 ಮತಗಳ ಅಂತರದಲ್ಲಿ ಮುಂದಿದ್ದರೆ, ದಕ್ಷಿಣದಲ್ಲಿ ತೇಜಸ್ವಿಸೂರ್ಯ ಮುಂದಿದ್ದಾರೆ. ಅಲ್ಲದೆ, ಮೈಸೂರು ಲೋಕಸಭಾ ಕ್ಷೇತ್ರದಲ್ಲಿ ಪ್ರತಾಪ್ ಸಿಂಹ 12000 ಮತಗಳ ಅಂತರದಲ್ಲಿ ಮುಂದಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ವಿಜಯಶಂಕರ್ ಹಿಂದಿದ್ದಾರೆ. ತುಮಕೂರು ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಮುಂದಿದ್ದಾರೆ. ಜೆಡಿಎಸ್‌‌ನ ದೇವೇಗೌಡ ಹಿಂದಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.