ADVERTISEMENT

ಇಂದು ನಿರ್ಲಕ್ಷಿಸುವ ರೋಗಗಳು ನಾಳೆ ಮಹಾಮಾರಿಗಳಾಗಬಹುದು: ಭಾರತ್ ಬಯೋಟೆಕ್ ಮುಖ್ಯಸ್ಥ

ಪಿಟಿಐ
Published 25 ಜನವರಿ 2022, 5:53 IST
Last Updated 25 ಜನವರಿ 2022, 5:53 IST
ಭಾರತ್ ಬಯೋಟೆಕ್ ಮುಖ್ಯಸ್ಥ ಡಾ. ಕೃಷ್ಣ ಎಲ್ಲ ಮತ್ತು ಅವರ ಪತ್ನಿ ಸುಚಿತ್ರಾ
ಭಾರತ್ ಬಯೋಟೆಕ್ ಮುಖ್ಯಸ್ಥ ಡಾ. ಕೃಷ್ಣ ಎಲ್ಲ ಮತ್ತು ಅವರ ಪತ್ನಿ ಸುಚಿತ್ರಾ   

ನವದೆಹಲಿ: ನಾವು ಇಂದು ನಿರ್ಲಕ್ಷಿಸುವ ರೋಗಗಳು ಮುಂದಿನ ದಿನಗಳಲ್ಲಿ ಸಾಂಕ್ರಾಮಿಕಗಳಾಗಬಹುದು ಎಂದು ಭಾರತ್‌ ಬಯೋಟೆಕ್‌ ಇಂಟರ್‌ನ್ಯಾಷನಲ್‌ ಲಿಮಿಟೆಡ್‌ನ ಮುಖ್ಯಸ್ಥ ಡಾ. ಕೃಷ್ಣ ಎಲ್ಲ ಅವರು ಸೋಮವಾರ ಎಚ್ಚರಿಸಿದ್ದಾರೆ.

ಚಂಡೀಗಡದಲ್ಲಿರುವ‌ ಸೂಕ್ಷ್ಮಜೀವಿ ತಂತ್ರಜ್ಞಾನ ಸಂಸ್ಥೆಯ (ಐಎಂಟೆಕ್) 38ನೇ ಸಂಸ್ಥಾಪನಾ ದಿನದ ಅಂಗವಾಗಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.'ಸಾಂಕ್ರಾಮಿಕ ಸನ್ನಿವೇಶದಲ್ಲಿ ನಾವಿನ್ಯತೆ ಮತ್ತು ನಾಯಕತ್ವ' ವಿಷಯ ಕುರಿತುವರ್ಚುವಲ್‌ ಉಪನ್ಯಾಸ ನೀಡಿದ ಕೃಷ್ಣ,ನಾವು ಇಂದು ನಿರ್ಲಕ್ಷಿಸುವ ರೋಗಗಳು ಮುಂದಿನ ದಿನಗಳಲ್ಲಿ ಜಾಗತಿಕ ಸಾಂಕ್ರಾಮಿಕಗಳಾಗಬಹುದು. ಅವುಗಳ ವಿರುದ್ಧ ಹೋರಾಟ ನಡೆಸಲು ಸೂಕ್ತ ಯೋಜನೆ ರೂಪಿಸಿಕೊಳ್ಳಬೇಕು ಎಂದು ಕಿವಿಮಾತು ಹೇಳಿದ್ದಾರೆ.

ಭಾರತ್ ಬಯೋಟೆಕ್‌ ಅಭಿವೃದ್ಧಿಪಡಿಸಿದ 'ಕೋವಾಕ್ಸಿನ್', ಭಾರತದ ಮೊದಲದೇಶೀಯಕೋವಿಡ್ ತಡೆ ಲಸಿಕೆ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಜಗತ್ತಿನಾದ್ಯಂತಹೆಚ್ಚಿನ ಜನರಿಗೆ ವಿತರಿಸಲಾಗಿದೆ ಎಂದು ತಿಳಿಸಿದ್ದಾರೆ.

ADVERTISEMENT

ಮುಂದುವರಿದು, ಸಾಂಕ್ರಾಮಿಕ ರೋಗಗಳಿಂದ ಉಂಟಾದ ಸಾರ್ವಜನಿಕ ಆರೋಗ್ಯ ಸಮಸ್ಯೆಗಳನ್ನು ಪರಿಹರಿಸಲು ಲಸಿಕೆ ಅಭಿವೃದ್ಧಿಯಲ್ಲಿ ನವೀನ ತಂತ್ರಜ್ಞಾನ ಅಳವಡಿಸಿಕೊಳ್ಳುವುದು ಅತ್ಯಗತ್ಯ.ಭಾರತೀಯ ಔಷಧ ಕಂಪೆನಿಗಳು ಜಾಗತಿಕ ಮಾರುಕಟ್ಟೆಯಲ್ಲಿ ಸ್ಪರ್ಧಿಸಲು‌ ನವೀನ ಆವಿಷ್ಕಾರಗಳನ್ನು ಅಳವಡಿಸಿಕೊಳ್ಳಬೇಕು ಎಂದುಒತ್ತಿ ಹೇಳಿದ್ದಾರೆ.

ಐಎಂಟೆಕ್ ಅನ್ನು1984ರಲ್ಲಿ ಸ್ಥಾಪಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.