ADVERTISEMENT

ನೇಪಾಳ: ಪಶುಪತಿನಾಥ ದೇವಾಲಯದಿಂದ ಹಿಂದಿರುಗುತ್ತಿದ್ದ ಭಾರತೀಯರಿದ್ದ ಬಸ್ ಮೇಲೆ ದಾಳಿ

ಪಿಟಿಐ
Published 12 ಸೆಪ್ಟೆಂಬರ್ 2025, 13:47 IST
Last Updated 12 ಸೆಪ್ಟೆಂಬರ್ 2025, 13:47 IST
<div class="paragraphs"><p>ಕಠ್ಮಂಡುವಿನ ಪಶುಪತಿನಾಥ ದೇವಾಲಯ </p></div>

ಕಠ್ಮಂಡುವಿನ ಪಶುಪತಿನಾಥ ದೇವಾಲಯ

   

ಪಿಟಿಐ ಚಿತ್ರ

ಮಹಾರಾಜ್‌ಗಂಜ್‌ (ಯುಪಿ): ನೇಪಾಳದಲ್ಲಿ ನಡೆಯುತ್ತಿರುವ ಹಿಂಸಾಚಾರದ ನಡುವೆ ಕಠ್ಮಂಡುವಿನ ಪಶುಪತಿನಾಥ ದೇವಾಲಯದಿಂದ ಹಿಂದಿರುಗುತ್ತಿದ್ದ ಭಾರತದ ಪ್ರವಾಸಿ ಬಸ್‌ ಮೇಲೆ ಪ್ರತಿಭಟನಕಾರರು ದಾಳಿ ನಡೆಸಿದ್ದರಿಂದ ಕೆಲ ಪ್ರಯಾಣಿಕರು ಗಾಯಗೊಂಡಿದ್ದಾರೆ ಎಂದು ಬಸ್‌ ಚಾಲಕ ಆರೋಪಿಸಿದ್ದಾರೆ.

ADVERTISEMENT

ಭಾರತ–ನೇಪಾಳ ಗಡಿಯಲ್ಲಿ ಸೋನೌಲಿ ಬಳಿ ಸೆ.9ರಂದು 49 ಭಾರತೀಯರಿದ್ದ ಬಸ್‌ ಮೇಲೆ ಕಲ್ಲು ತೂರಾಟ ನಡೆಸಿದ್ದು, ಕಿಟಕಿ ಗಾಜುಗಳು ಒಡೆದಿವೆ. ಬಸ್‌ನಲ್ಲಿದ್ದ ಮಹಿಳೆಯರು, ವೃದ್ಧರು ಸೇರಿದಂತೆ ಪ್ರಯಾಣಿಕರು ಗಾಯಗೊಂಡಿದ್ದಾರೆ. 

ವರದಿಗಳ ಪ್ರಕಾರ, ಸ್ಥಳೀಯ ಅಧಿಕಾರಿಗಳು ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಉಳಿದವರನ್ನು ನೇಪಾಳ ಸರ್ಕಾರವು ಭಾರತೀಯ ರಾಯಭಾರ ಕಚೇರಿ ವ್ಯವಸ್ಥೆ ಮಾಡಿದ ವಿಶೇಷ ವಿಮಾನದಲ್ಲಿ ಭಾರತಕ್ಕೆ ಕಳುಹಿಸಿಕೊಟ್ಟಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.