ನವದೆಹಲಿ: ತೂತ್ತುಕುಡಿ ತಾಮ್ರ ಸಂಸ್ಕರಣಾಘಟಕವನ್ನು ಶಾಶ್ವತವಾಗಿ ಮುಚ್ಚಬೇಕೆಂಬ ತಮಿಳುನಾಡು ಸರ್ಕಾರದ ಆದೇಶಕ್ಕೆ ಸಂಬಂಧಿಸಿದಂತೆ ಸರ್ಕಾರ ಹಾಗೂ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಗೆರಾಷ್ಟ್ರೀಯ ಹಸಿರು ನ್ಯಾಯಮಂಡಳಿ (ಎನ್ಜಿಟಿ) ನೋಟಿಸ್ ನೀಡಿದೆ.
ಸರ್ಕಾರದ ಆದೇಶ ಪ್ರಶ್ನಿಸಿ ವೇದಾಂತ ಕಂಪನಿ ಎನ್ಜಿಟಿಗೆ ಅರ್ಜಿ ಸಲ್ಲಿಸಿತ್ತು. ಗಂಧಕಾಮ್ಲ ಸೋರಿಕೆಯಿಂದಾಗಿ, ಘಟಕ ಮುಚ್ಚುವಂತೆ ಆಗ್ರಹಿಸಿ ಈಚೆಗೆ ಸ್ಥಳೀಯರು ನಡೆಸಿದ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿ 13 ಮಂದಿ ಸಾವಿಗೀಡಾಗಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.