ನವದೆಹಲಿ: ಭಯೋತ್ಪಾದನಾ ಕೃತ್ಯಗಳಿಗೆ ಸಂಬಂಧಿಸಿ ರಾಷ್ಟ್ರೀಯ ತನಿಖಾ ದಳ (ಎನ್ಐಎ) ಈಗವಿದೇಶಗಳಲ್ಲಿಯೂ ತನಿಖೆ ಕೈಗೊಳ್ಳಬಹುದು.
ಎನ್ಐಎ ಕಾಯ್ದೆಗೆ ತಿದ್ದುಪಡಿ ತಂದ ನಂತರ ಕೇಂದ್ರ ಸರ್ಕಾರ ಶುಕ್ರವಾರ ಅಧಿಸೂಚನೆ ಹೊರಡಿಸಿದೆ. ಭಯೋತ್ಪಾದನಾ ಕೃತ್ಯಗಳು, ಭಾರತದ ಹಿತಾಸಕ್ತಿಗೆ ಧಕ್ಕೆ ತರುವ ಸೈಬರ್ ಅಪರಾಧ ಹಾಗೂ ಮಾನವ ಕಳ್ಳಸಾಗಣೆಯಂಥ ಕೃತ್ಯ ವಿದೇಶದಲ್ಲಿ ಕಂಡು ಬಂದರೂ ಈಗ ಎನ್ಐಎ ತನಿಖೆ ನಡೆಸಬಹುದಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.