ನವದೆಹಲಿ: ಉದಯಪುರದ ಟೇಲರ್ ಕನ್ಹಯ್ಯ ಲಾಲ್ ಅವರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ರಾಷ್ಟ್ರೀಯ ತನಿಖಾ ದಳವು(ಎನ್ಐಎ) ಏಳನೇ ಆರೋಪಿಯನ್ನು ಬಂಧಿಸಿದೆ ಎಂದು ಅಧಿಕಾರಿಗಳು ಭಾನುವಾರ ತಿಳಿಸಿದ್ದಾರೆ.
ಫರ್ಹಾದ್ ಮೊಹಮ್ಮದ್ ಶೇಖ್ ಎಂಬಾತನನ್ನು ಶನಿವಾರ ಬಂಧಿಸಲಾಗಿದೆ. ಈತ ಪ್ರಕರಣದ ಪ್ರಮುಖ ಆರೋಪಿ ರಿಯಾಜ್ ಅನ್ಸಾರಿಯ ಆಪ್ತನಾಗಿದ್ದು, ಟೇಲರ್ ಹತ್ಯೆಯ ಸಂಚಿನಲ್ಲಿ ಭಾಗಿಯಾಗಿದ್ದಾನೆ ಎಂದು ಹೇಳಿದ್ದಾರೆ.
ಕನ್ಹಯ್ಯ ಲಾಲ್ ಅವರನ್ನು ಜೂನ್ 28ರಂದು ಅವರ ಅಂಗಡಿಯಲ್ಲಿ ಆರೋಪಿಗಳಾದ ರಿಯಾಜ್ ಅನ್ಸಾರಿ ಮತ್ತು ಗೌಸ್ ಮಹಮ್ಮದ್ ಶಿರಚ್ಛೇದ ಮಾಡಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.