ADVERTISEMENT

ಕಾಶ್ಮೀರದ 15 ಸ್ಥಳಗಳಲ್ಲಿ ಎನ್‌ಐಎ ದಾಳಿ

​ಪ್ರಜಾವಾಣಿ ವಾರ್ತೆ
Published 9 ಮೇ 2023, 14:13 IST
Last Updated 9 ಮೇ 2023, 14:13 IST
ಶ್ರೀನಗರದ ಬರಮುಲ್ಲಾ ಜಿಲ್ಲೆಯಲ್ಲಿ ರಾಷ್ಟ್ರೀಯ ತನಿಖಾ ಸಂಸ್ಥೆ ದಾಳಿ ನಡೆಸಿದ ಸಂದರ್ಭದಲ್ಲಿ ಗಾರ್ಡ್‌ಗಳು ಹೊರಗೆ ಕಾವಲು ನಿಂತಿರುವುದು – ಐಎಎನ್‌ಎಸ್ ಚಿತ್ರ
ಶ್ರೀನಗರದ ಬರಮುಲ್ಲಾ ಜಿಲ್ಲೆಯಲ್ಲಿ ರಾಷ್ಟ್ರೀಯ ತನಿಖಾ ಸಂಸ್ಥೆ ದಾಳಿ ನಡೆಸಿದ ಸಂದರ್ಭದಲ್ಲಿ ಗಾರ್ಡ್‌ಗಳು ಹೊರಗೆ ಕಾವಲು ನಿಂತಿರುವುದು – ಐಎಎನ್‌ಎಸ್ ಚಿತ್ರ   

ಶ್ರೀನಗರ (ಪ್ರಜಾವಾಣಿ ವಾರ್ತೆ): ಪಾಕಿಸ್ತಾನ ಬೆಂಬಲಿತ ಭಯೋತ್ಪಾದನೆ ಸಂಚಿನ ಪ್ರಕರಣದಲ್ಲಿ ಪ್ರತ್ಯೇಕತಾವಾದಿಗಳು ಮತ್ತು ಉಗ್ರಗಾಮಿಗಳ ವಿರುದ್ಧದ ಕಾರ್ಯಾಚರಣೆಯನ್ನು ಮುಂದುವರಿಸಿರುವ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಮಂಗಳವಾರ ಜಮ್ಮು ಮತ್ತು ಕಾಶ್ಮೀರದಾದ್ಯಂತ 15 ಸ್ಥಳಗಳಲ್ಲಿ ದಾಳಿ ನಡೆಸಿತು.

ಜಮ್ಮು–ಕಾಶ್ಮೀರ ಪೊಲೀಸರು ಹಾಗೂ ಸಿಪಿಆರ್‌ಎಫ್‌ನ ಸಹಕಾರದೊಂದಿಗೆ ಎನ್‌ಐಎ ಪಡೆ ಕಾಶ್ಮೀರದ ಶ್ರೀನಗರ, ಶೋಪಿಯಾನ್‌, ಕುಲ್ಗಾಮ್‌, ಬುದ್ಗಾಮ್‌, ಬರಮುಲ್ಲಾ ಮತ್ತು ಅನಂತನಾಗ್ ಜಿಲ್ಲೆಗಳಲ್ಲಿ ಹಾಗೂ ಜಮ್ಮುವಿನ ಪೂನಚ್‌ ಮತ್ತು ರಾಜೌರಿ ಜಿಲ್ಲೆಗಳಲ್ಲಿ ದಾಳಿ ನಡೆಸಿತು.

2022ರಲ್ಲಿ ದಾಖಲಾದ ಪಾಕಿಸ್ತಾನ ಬೆಂಬಲಿತ ಭಯೋತ್ಪಾದನೆ ಸಂಚಿನ ಪ್ರಕರಣದಲ್ಲಿ ಸಂಬಂಧ ಹೊಂದಿರುವವರಿಗಾಗಿ ಮೇ 2ರಂದು ಎನ್ಐಎ ಜಮ್ಮು ಮತ್ತು ಕಾಶ್ಮೀರದಲ್ಲಿ ಶೋಧ 

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.