ADVERTISEMENT

ಚಿನ್ನ ಕಳ್ಳಸಾಗಣೆ ಪ್ರಕರಣ: ಸ್ವಪ್ನಾ ಸುರೇಶ್‌ಗೆ ಜಾಮೀನು ನಿರಾಕರಣೆ

ಕೇರಳ: ಅಕ್ರಮ ಚಿನ್ನ ಸಾಗಣೆ ಪ್ರಕರಣ

ಪಿಟಿಐ
Published 10 ಆಗಸ್ಟ್ 2020, 7:13 IST
Last Updated 10 ಆಗಸ್ಟ್ 2020, 7:13 IST
ಬಂಧಿತ ಸ್ವಪ್ನಾ ಸುರೇಸ್‌
ಬಂಧಿತ ಸ್ವಪ್ನಾ ಸುರೇಸ್‌   

ಕೊಚ್ಚಿ: ಅಕ್ರಮ ಚಿನ್ನ ಕಳ್ಳಸಾಗಣೆ ಪ್ರಕರಣದ ಪ್ರಮುಖ ಆರೋಪಿ ಸ್ವಪ್ನಾ ಸುರೇಶ್ ಅವರ ಜಾಮೀನು ಅರ್ಜಿಯನ್ನು ರಾಷ್ಟ್ರೀಯ ತನಿಖಾ ದಳದ (ಎನ್‌ಐಎ) ವಿಶೇಷ ನ್ಯಾಯಾಲಯ ವಜಾಗೊಳಿಸಿದೆ.

ಎನ್‌ಐಎ ಅಧಿಕಾರಿಗಳು ಸಲ್ಲಿಸಿದ್ದ ಪ್ರಕರಣದ ಪೂರ್ಣ ವಿವರವನ್ನು ಪರಿಶೀಲಿಸಿದ ನ್ಯಾಯಾಲಯ,’ಈ ಪ್ರಕರಣದಲ್ಲಿ ಆರೋಪಿ ಭಾಗಿಯಾಗಿರುವುದು ಎನ್‌ಐಎ ಅಧಿಕಾರಿಗಳು ನೀಡಿರುವ ಸಾಕ್ಷ್ಯಾಧಾರಗಳಿಂದ ತಿಳಿದುಬಂದಿದೆ. ತನಿಖೆಯನ್ನು ತೀವ್ರಗೊಳಿಸಬೇಕು’ ಎಂದು ತಿಳಿಸಿ, ಸ್ವಪ್ನಾ ಅವರ ಜಾಮೀನು ಅರ್ಜಿಯನ್ನು ವಜಾಗೊಳಿಸಿದೆ.

’ಯಾವುದೇ ಆಧಾರವಿಲ್ಲದೇ ನನ್ನ ವಿರುದ್ಧ ಕಪೋಕಲ್ಪಿತವಾಗಿ ಆರೋಪಗಳನ್ನು ಮಾಡಲಾಗುತ್ತಿದೆ. ಈ ಪ್ರಕರಣದಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ರಾಜಕೀಯ ವಿಚಾರವೂ ಸೇರಿಕೊಂಡಿದೆ. ಹೀಗಾಗಿ ನನಗೆ ಜಾಮೀನು ನೀಡಬೇಕೆಂದು’ ಸ್ವಪ್ನಾ ಸುರೇಶ್ ಜಾಮೀನು ಅರ್ಜಿಯಲ್ಲಿ ಮನವಿ ಮಾಡಿದ್ದರು.

ADVERTISEMENT

ರಾಜತಾಂತ್ರಿಕ ಮಾರ್ಗಗಳನ್ನು ದುರುಪಯೋಗಪಡಿಸಿಕೊಂಡು ದುಬೈನಿಂದ ಭಾರತಕ್ಕೆ ಅಕ್ರಮವಾಗಿ ಚಿನ್ನವನ್ನು ಸಾಗಣೆ ಮಾಡಿದ ಆರೋಪದಡಿ ಸ್ವಪ್ನಾ ಸುರೇಶ್ ಸೇರಿದಂತೆ ಇತರರನ್ನು ಬಂಧಿಸಿ, ಪ್ರಕರಣದ ತನಿಖೆಯನ್ನು ರಾಷ್ಟ್ರೀಯ ತನಿಖಾ ದಳಕ್ಕೆ ವಹಿಸಲಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.