ನವದೆಹಲಿ: ಸುಪ್ರೀಂಕೋರ್ಟ್ಗೆ ನೇಮಕಗೊಂಡಿರುವ 9 ನೂತನ ನ್ಯಾಯಮೂರ್ತಿಗಳಿಗೆ ಮುಖ್ಯನ್ಯಾಯಮೂರ್ತಿ ಎನ್.ವಿ.ರಮಣ ಅವರು ಮಂಗಳವಾರ ಪ್ರತಿಜ್ಞಾವಿಧಿ ಬೋಧಿಸಿದರು.
ಸುಪ್ರೀಂಕೋರ್ಟ್ನ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ 9 ನ್ಯಾಯಮೂರ್ತಿಗಳು ಏಕಕಾಲಕ್ಕೆ ಪ್ರತಿಜ್ಞಾವಿಧಿ ಸ್ವೀಕರಿಸಿದ್ದಾರೆ.
ಇದರೊಂದಿಗೆ ಸುಪ್ರೀಂಕೋರ್ಟ್ನ ನ್ಯಾಯಮೂರ್ತಿಗಳ ಒಟ್ಟು ಸಂಖ್ಯೆ 33ಕ್ಕೆ ಏರಿದಂತಾಗಿದೆ.
ನ್ಯಾಯಮೂರ್ತಿಗಳಾದ ಅಭಯ್ ಶ್ರೀನಿವಾಸ ಓಕಾ, ವಿಕ್ರಮ್ ನಾಥ್, ಜಿತೇಂದ್ರಕುಮಾರ್ ಮಾಹೇಶ್ವರಿ, ಹಿಮಾ ಕೊಹ್ಲಿ, ಬಿ.ವಿ.ನಾಗರತ್ನ, ಸಿ.ಟಿ.ರವಿಕುಮಾರ್, ಎಂ.ಎಮ.ಸುಂದ್ರೇಶ್, ಬೇಲಾ ಎಂ.ತ್ರಿವೇದಿ ಹಾಗೂ ಪಿ.ಎಸ್.ನರಸಿಂಹ ಅವರು ಪ್ರತಿಜ್ಞಾವಿಧಿ ಸ್ವೀಕರಿಸಿದರು.
ಇವುಗಳನ್ನು ಓದಿ...
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.