ಲಖನೌ: ಉತ್ತರ ಪ್ರದೇಶದ ಪಿಲಿಭಿತ್ ಜಿಲ್ಲೆಯಲ್ಲಿ 9 ವರ್ಷದ ಬಾಲಕಿಯನ್ನು ಬರ್ಬರವಾಗಿ ಕೊಲೆ ಮಾಡಲಾಗಿದೆ.
ಪೊಲೀಸ್ ಮೂಲಗಳ ಪ್ರಕಾರ, ಜಿಲ್ಲೆಯ ಮಾಧವಪುರ ಗ್ರಾಮದ ಬಳಿಯ ಗೋಧಿ ಹೊಲದಲ್ಲಿ ಬಾಲಕಿ ಹೊಟ್ಟೆಯನ್ನು ಕತ್ತರಿಸಲಾಗಿದೆ.ದೇಹದ ಅಂಗಗಳು ಚೆಲ್ಲಾಪಿಲ್ಲಿಯಾಗಿ ಬಿದ್ದಿದ್ದವು. ಶವ ರಕ್ತದ ಮಡುವಿನಲ್ಲಿ ಬಿದ್ದಿರುವುದು ಶನಿವಾರ ಪತ್ತೆಯಾಗಿದೆ.
ಶುಕ್ರವಾರ ಸಂಜೆ ಬಾಲಕಿ ತನ್ನ ಚಿಕ್ಕಪ್ಪನೊಂದಿಗೆ ‘ಉರುಸ್’ (ಸೂಫಿ ಸಂತರ ಪುಣ್ಯತಿಥಿ ಸಂದರ್ಭದಲ್ಲಿ ನಡೆಯುವ ಜಾತ್ರೆ) ಗೆ ಭೇಟಿ ನೀಡಲು ಹೊರಗೆ ಹೋಗಿದ್ದಳು. ಆದರೆ, ಮನೆಗೆ ಹಿಂದಿರುಗಲಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.
ಬಾಲಕಿ ಪತ್ತೆಯಾದ ವೇಳೆ ಉಸಿರಾಡುತ್ತಿದ್ದಳು ಮತ್ತು ದುಷ್ಕರ್ಮಿ ಹೆಸರು ಬಹಿರಂಗಪಡಿಸಲು ಯತ್ನಿಸಿದಳು. ಆದರೆ, ಹೆಸರು ಬಹಿರಂಗಪಡಿಸುವ ಮುನ್ನವೇ ಮೃತಪಟ್ಟಳು ಎಂದು ಬಾಲಕಿ ತಂದೆಯನ್ನು ಉಲ್ಲೇಖಿಸಿ ಮೂಲಗಳು ತಿಳಿಸಿವೆ.
ಸಂತ್ರಸ್ತೆ ಜತೆ ಕೊನೆಯದಾಗಿ ಕಾಣಿಸಿಕೊಂಡ ಚಿಕ್ಕಪ್ಪನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಶವಪರೀಕ್ಷೆ ಸಮಯದಲ್ಲಿ ಅತ್ಯಾಚಾರ ದೃಢಪಟ್ಟಿಲ್ಲ ಎಂದು ಮೂಲಗಳು ತಿಳಿಸಿವೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.