ADVERTISEMENT

ನಿರ್ಭಯಾ: ಮರಣದಂಡನೆ ತಡೆಕೋರಿ ಅರ್ಜಿ ಸಲ್ಲಿಕೆ

​ಪ್ರಜಾವಾಣಿ ವಾರ್ತೆ
Published 29 ಫೆಬ್ರುವರಿ 2020, 18:57 IST
Last Updated 29 ಫೆಬ್ರುವರಿ 2020, 18:57 IST
   

ನವದೆಹಲಿ: ನಿರ್ಭಯಾ ಸಾಮೂಹಿಕ ಅತ್ಯಾಚಾರ ಪ್ರಕರಣದ ನಾಲ್ವರು ಆರೋಪಿಗಳ ಮರಣದಂಡನೆಗೆ ತಡೆ ಕೋರಿ ಅಪರಾಧಿಗಳಾದ ಅಕ್ಷಯ್‌ ಸಿಂಗ್‌ ಮತ್ತು ಪವನ್‌ ಕುಮಾರ್‌ ಗುಪ್ತಾ ಶನಿವಾರ ದೆಹಲಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ.

‘ರಾಷ್ಟ್ರಪತಿಗೆ ಹೊಸದಾಗಿ ಸಲ್ಲಿಸಿರುವ ಕ್ಷಮಾದಾನ ಅರ್ಜಿ ಇನ್ನೂ ಇತ್ಯರ್ಥಗೊಂಡಿಲ್ಲ’ ಎಂದು ಅಕ್ಷಯ್‌ ಅರ್ಜಿಯಲ್ಲಿ ತಿಳಿಸಿದ್ದಾನೆ. ಅಕ್ಷಯ್‌ ಸಲ್ಲಿಸಿರುವ ಅರ್ಜಿ ಕುರಿತು ಮಾರ್ಚ್‌ 2ರಂದು ಪ್ರತಿಕ್ರಿಯೆ ನೀಡುವಂತೆ ಹೆಚ್ಚುವರಿ ಸೆಷನ್ಸ್‌ ನ್ಯಾಯಾಧೀಶ ಧರ್ಮೇಂದರ್‌ ರಾಣಾ ಅವರು, ತಿಹಾರ್‌ ಜೈಲಿನ ಅಧಿಕಾರಿಗಳಿಗೆ ನೋಟಿಸ್‌ ಜಾರಿಗೊಳಿಸಿದ್ದಾರೆ.ನಾಲ್ವರು ಅಪರಾಧಿಗಳಿಗೆ ಮಾರ್ಚ್‌ 3ರಂದು ಗಲ್ಲು ಶಿಕ್ಷೆ ನಿಗದಿಗೊಳಿಸಲಾಗಿದೆ.

ವಿಚಾರಣೆ ನಾಳೆ: ಪವನ್‌ ಗುಪ್ತಾ ಸುಪ್ರೀಂ ಕೋರ್ಟ್‌ಗೆ ಸಲ್ಲಿಸಿರುವ ಪರಿಹಾರಾತ್ಮಕ ಅರ್ಜಿಯ ವಿಚಾರಣೆ ಸೋಮವಾರ ನಡೆಯಲಿದೆ. ನ್ಯಾಯಮೂರ್ತಿಗಳಾದ ಎನ್‌.ವಿ.ರಮಣ, ಅರುಣ್‌ ಮಿಶ್ರಾ, ಆರ್‌.ಎಫ್‌. ನರಿಮನ್‌, ಆರ್‌. ಭಾನುಮತಿ ಮತ್ತು ಆಶೋಕ್‌ ಭೂಷಣ್‌ ಅವರನ್ನೊಳಗೊಂಡಿರುವ ಪೀಠ ಕೊಠಡಿಯೊಳಗೆ ಅರ್ಜಿಯ ವಿಚಾರಣೆ ನಡೆಸಲಿದೆ.

ADVERTISEMENT

ಗಲ್ಲುಶಿಕ್ಷೆಯನ್ನು ಜೀವಾವಧಿ ಶಿಕ್ಷೆಗೆ ಇಳಿಸಬೇಕೆಂದು ಪವನ್‌ ಗುಪ್ತಾ ಕೋರಿದ್ದಾನೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.