ನವದೆಹಲಿ : ನಿರ್ಭಯಾ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಮರಣ ದಂಡನೆಗೆ ಗುರಿಯಾಗಿರುವ ಪವನ್ ಗುಪ್ತಾ (25), ತನಗೆ ನೀಡಿರುವ ಶಿಕ್ಷೆಯನ್ನು ಮಾರ್ಪಡಿಸುವಂತೆ ಸುಪ್ರೀಂ ಕೋರ್ಟ್ಗೆ ಶುಕ್ರವಾರ ಪರಿಹಾರಾತ್ಮಕ ಅರ್ಜಿ ಸಲ್ಲಿಸಿದ್ದಾನೆ. ತನಗೆ ನೀಡಿರುವ ಮರಣ ದಂಡನೆಯನ್ನು ಜೀವಾವಧಿ ಶಿಕ್ಷೆಗೆ ಇಳಿಸಬೇಕು ಎಂದು ಪವನ್ ಮನವಿ ಸಲ್ಲಿಸಿದ್ದಾನೆ. ಈ ಅರ್ಜಿ ತಿರಸ್ಕೃತವಾದರೆ, ರಾಷ್ಟ್ರಪತಿಗೆ ಕ್ಷಮಾದಾನ ಅರ್ಜಿ ಸಲ್ಲಿಸಲು ಪವನ್ಗೆ ಅವಕಾಶವಿದೆ. ಉಳಿದ ಅಪರಾಧಿಗಳ ಎಲ್ಲಾ ಅರ್ಜಿಗಳೂ ತಿರಸ್ಕೃತವಾಗಿವೆ.
ಗುಪ್ತಾ ಸೇರಿದಂತೆ ನಾಲ್ವರು ಅಪರಾಧಿಗಳಿಗೆ ಮಾರ್ಚ್ 3ರಂದು ಮರಣ ದಂಡನೆ ಜಾರಿ ಮಾಡಲು ದಿನ ನಿಗದಿ ಮಾಡಲಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.