ನವದೆಹಲಿ: ಕೃಷಿ ಕ್ಷೇತ್ರಕ್ಕೆ ಚೇತರಿಕೆ ನೀಡುವುದು, ಕೃಷಿ ಮಾರುಕಟ್ಟೆ ಮತ್ತು ಮೂಲಸೌಕರ್ಯದಲ್ಲಿ ಖಾಸಗಿ ಹೂಡಿಕೆ ಹೆಚ್ಚಿಸುವುದಕ್ಕಾಗಿ ಸಲಹೆಗಳನ್ನು ನೀಡಲು ನೀತಿ ಆಯೋಗವು ಮುಖ್ಯಮಂತ್ರಿಗಳ ಸಮಿತಿಯನ್ನು ರಚಿಸಿದೆ.
ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡಣವಿಸ್ ಸಮಿತಿಯ ಸಂಚಾಲಕರು. ಎಚ್.ಡಿ.ಕುಮಾರಸ್ವಾಮಿ (ಕರ್ನಾಟಕ), ಕಮಲ್ ನಾಥ್ (ಮಧ್ಯಪ್ರದೇಶ), ಮನೋಹರ ಲಾಲ್ ಖಟ್ಟರ್ (ಹರಿಯಾಣ), ಯೋಗಿ ಆದಿತ್ಯನಾಥ (ಉತ್ತರ ಪ್ರದೇಶ), ಪೆಮಾ ಖಂಡು (ಅರುಣಾಚಲ ಪ್ರದೇಶ), ವಿಜಯ್ ರೂಪಾಣಿ (ಗುಜರಾತ್) ಸಮಿತಿಯ ಸದಸ್ಯರು.
ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಅವರೂ ಸದಸ್ಯರಾಗಿದ್ದರೆ, ನೀತಿ ಆಯೋಗದ ಸದಸ್ಯ ರಮೇಶ್ ಚಂದ್ರ ಅವರು ಸಮಿತಿಯ ಸದಸ್ಯಕಾರ್ಯದರ್ಶಿಯಾಗಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.