ADVERTISEMENT

ಅಂತರರಾಜ್ಯ ರಸ್ತೆ ತಡೆ ತೆರವಿಗೆ ನಿತಿನ್‌ ಗಡ್ಕರಿ ಸೂಚನೆ

​ಪ್ರಜಾವಾಣಿ ವಾರ್ತೆ
Published 28 ಏಪ್ರಿಲ್ 2020, 20:00 IST
Last Updated 28 ಏಪ್ರಿಲ್ 2020, 20:00 IST
ನಿತಿನ್‌ ಗಡ್ಕರಿ
ನಿತಿನ್‌ ಗಡ್ಕರಿ   

ನವದೆಹಲಿ: ಟ್ರಕ್‌ ಹಾಗೂ ಸರಕು ಹೊತ್ತ ವಾಹನಗಳ ಸುಗಮ ಸಂಚಾರಕ್ಕಾಗಿ ಅಂತರರಾಜ್ಯ ರಸ್ತೆಗಳನ್ನು ಬಂದ್‌ ಮಾಡಿರುವುದನ್ನು ತೆರವುಗೊಳಿಸಬೇಕು ಎಂದು ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್‌ ಗಡ್ಕರಿ ಎಲ್ಲ ರಾಜ್ಯಗಳನ್ನು ಮಂಗಳವಾರ ಒತ್ತಾಯಿಸಿದ್ದಾರೆ.

ವಿವಿಧ ರಾಜ್ಯಗಳ ಸಾರಿಗೆ ಸಚಿವರೊಂದಿಗೆ ವಿಡಿಯೊ ಕಾನ್ಫರೆನ್ಸ್‌ ಮೂಲಕ ಸಂವಾದ ನಡೆಸಿದ ಅವರು, ‘ಟ್ರಕ್‌ ಚಾಲಕರು, ಕೂಲಿಕಾರ್ಮಿಕರು ಆರೋಗ್ಯ ಮಾರ್ಗಸೂಚಿಗಳನ್ನು ಪಾಲಿಸಬೇಕು. ಸಮರ್ಪಕ ಅಂತರ ಕಾಯ್ದುಕೊಳ್ಳಬೇಕು, ಮಾಸ್ಕ್‌ ಧರಿಸುವುದು ಹಾಗೂ ಸ್ಯಾನಿಟೈಜರ್‌ ಬಳಸುತ್ತಾರೆಯೇ ಎಂಬುದನ್ನು ಖಾತರಿಪಡಿಸಿಕೊಳ್ಳಬೇಕು’ ಎಂದು ಸಲಹೆ ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT