ADVERTISEMENT

‘ರೈಲು ಸಂಚಾರ ಪುನರಾರಂಭ ನಿರ್ಧಾರವಾಗಿಲ್ಲ’

ರೈಲ್ವೆ ಸಚಿವಾಲಯ ಸ್ಪಷ್ಟನೆ

ಪಿಟಿಐ
Published 4 ಏಪ್ರಿಲ್ 2020, 19:48 IST
Last Updated 4 ಏಪ್ರಿಲ್ 2020, 19:48 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ನವದೆಹಲಿ: ರೈಲು ಸಂಚಾರ ಪುನರಾರಂಭಿಸುವ ಕುರಿತು ಇನ್ನೂ ಅಂತಿಮ ನಿರ್ಧಾರವನ್ನು ತೆಗೆದುಕೊಂಡಿಲ್ಲ ಎಂದು ರೈಲ್ವೆ ಸಚಿವಾಲಯ ಶನಿವಾರ ತಿಳಿಸಿದೆ.

ಏಪ್ರಿಲ್ 15ರಿಂದ ರೈಲು ಸೇವೆಗಳನ್ನು ಪುನರಾರಂಭಿಸಲು ಭಾರತೀಯ ರೈಲ್ವೆ ಸಿದ್ಧತೆ ಆರಂಭಿಸಿದೆ ಎಂಬ ಸುದ್ದಿ ಹಬ್ಬಿದ ಹಿನ್ನೆಲೆಯಲ್ಲಿ ರೈಲ್ವೆ ಇಲಾಖೆ ಈ ಹೇಳಿಕೆ ನೀಡಿದೆ. ಈ ಕುರಿತು ಸದ್ಯದಲ್ಲಿಯೇ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ಇಲಾಖೆ ಸ್ಪಷ್ಟಪಡಿಸಿದೆ.

‘ಹಂತ-ಹಂತವಾಗಿ ಯಾವ ರೈಲುಗಳ ಸಂಚಾರ ಆರಂಭಿಸಬೇಕು ಎಂಬ‌ ಕ್ರಿಯಾಯೋಜನೆಯನ್ನು ರೈಲ್ವೆ ಮಂಡಳಿಗೆ ಸಲ್ಲಿಸುತ್ತೇವೆ. ಮಂಡಳಿಯು ಅಂತಿಮ ಅನುಮೋದನೆ ನೀಡುತ್ತದೆ’ ಎಂದು ಅಧಿಕಾರಿಗಳು ತಿಳಿಸಿದರು.

ADVERTISEMENT

Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.